ಗುಬ್ಬಿ ತಾಲ್ಲೂಕಿನಲ್ಲಿ ಚಿರತೆ ದಾಳಿಗೆ ಐದು ವರ್ಷದ ಬಾಲಕ ಬಲಿ
ತುಮಕೂರು, ಜ10,ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಮನಿಕುಪ್ಪೆ ಗ್ರಾಮದಲ್ಲಿ ಶುಕ್ರವಾರ ಚಿರತೆ ದಾಳಿಗೆ ಐದು ವರ್ಷದ ಬಾಲಕ ಬಲಿಯಾಗಿದ್ದಾನೆ.ಮೃತಪಟ್ಟ ಬಾಲಕನನ್ನು ಸಮರ್ಥ್ ಗೌಡ ಎಂದು ಗುರುತಿಸಲಾಗಿದೆ. ನತದೃಷ್ಟ ಬಾಲಕ ತನ್ನ ಅಜ್ಜಿಯೊಂದಿಗೆ ಮನೆಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಚಿರತೆ, ಮೊದಲು ಹಸುವಿನ ಮೇಲೆ ದಾಳಿ ಮಾಡಿದೆ. ನಂತರ ಹಿಂದೆ ನಡೆದು ಬರುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಕಾಡಿನೊಳಕ್ಕೆ ಎಳೆದೊಯ್ದಿದೆ. ಅರಣ್ಯಾಧಿಕಾರಿಗಳು ಶೋಧ ನಡೆಸಿದ ನಂತರ ಕಾಡಿನಲ್ಲಿ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಂತರ ಬಾಲಕನ ಮೃತದೇಹವನ್ನು ಪೋಷಕರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 