ಕೃಷ್ಣೆಯಲ್ಲಿ ಪ್ರವಾಹ ಸ್ಥಿತಿ ಇನ್ನಷ್ಟು ಗಂಭೀರ
ಬಾಗಲಕೋಟೆ, ಆ. 10 ಕೃಷ್ಣ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಪರಿಣಾಮ ಅಲಮಟ್ಟಿ ಜಲಾಶಯದಿಂದ ದಾಖಲೆಯ 5.30 ಲಕ್ಷ ಕ್ಯೂಸೆಕ್ ನೀರು ಹೊರಗೆ ಬಿಡಲಾಗುತ್ತಿದ್ದು ಪ್ರವಾಹ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದು ಕೃಷ್ಟ ಜಲಭಾಗ್ಯ ನಿಗಮದ ಮೂಲಗಳು ತಿಳಿಸಿವೆ.
ಕೃಷ್ಣ ಮತ್ತು ಭೀಮಾ ನದಿಗಳ ತೀರದಲ್ಲಿ ಜನ ಮತ್ತು ಜಾನುವಾರುಗಳ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಲಮಟ್ಟಿ ಜಲಾಶಯಕ್ಕೆ ಶನಿವಾರ 3,49,526 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು 3.67 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.
ಇಂದಿನ ನೀರಿನ ಮಟ್ಟ 517.080 ಮೀಟರ್ ಗೆ ಮುಟ್ಟಿದ್ದು ಗರಿಷ್ಠ ಮಟ್ಟ 519.60 ಮೀಟರ್ ಆಗಿದೆ.
ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆ ಮಾಡಿದ ಪರಿಣಾಮವಾಗಿ, ನದಿ ಪಾತ್ರದ ಹೆಚ್ಚಿನ ಪ್ರದೇಶಗಳು ಜಲಾವೃತವಾಗಿ, ಪ್ರವಾಹದಲ್ಲಿ ಮುಳುಗಿವೆ. ಅಣೆಕಟ್ಟಿನ ಉದ್ಯಾನವನಕ್ಕೂ ನದಿ ನೀರು ನುಗ್ಗಿ ಅನೇಕ ಮರಗಳೂ ಬುಡಮೇಲಾಗಿವೆ.
ಮಸೂತಿ ಗ್ರಾಮದ ದಂಡೆಯಲ್ಲಿರುವ 38 ಕ್ಕೂ ಹೆಚ್ಚು ಮನೆಗಳು ಪ್ರವಾಹಕ್ಕೆ ಸಿಕ್ಕಿ ಕುಸಿದುಬಿದ್ದಿವೆ
ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 