ಜಾನಪದ ಕಲೆ ಗ್ರಾಮೀಣ ಭಾಗದ ಜನರ ಜೀವನಾಡಿ
Folk art is the lifeblood of rural people
ಹೂವಿನಹಡಗಲಿ 06: ಜಾನಪದ ಕಲೆ ನಮ್ಮ ನಾಡಿನ ಗ್ರಾಮೀಣ ಭಾಗದ ಜನರ ಜೀವನಾಡಿ ಎಂದು ವಿಕೆಕೆ ಕಾಲೇಜಿನ ಪ್ರಾಚಾರ್ಯರಾದ ಮೈಲಾರ ರೇವಣಸಿದ್ದಪ್ಪ ಮಾಗಳ ಅಭಿಪ್ರಾಯ ಪಟ್ಟರು.
ತಾಲೂಕಿನ ಹಿರೇಹಡಗಲಿ ವಿಕೆಕೆ ಶಾಲೆಯಲ್ಲಿ ಕರ್ನಾಟಕ ಜಾನಪದ ಪರಿಷತ್ತು ವಿಜಯನಗರ ಜಿಲ್ಲೆ ಹಾಗೂ ಚಂದ್ರಶೇಖರ ಕಲಾಬಳಗ ಅಂಗೂರ್ ಇವರ ಸಹಯೋಗದೊಂದಿಗೆ ಆಯೋಜಿಸಿದ ಜಾನಪದ ಸಂಭ್ರಮ ಹಾಗೂ ಜಾನಪದ ಕಲೆಗಳ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಉದ್ಘಾಟನೆಯನ್ನು ಸದ್ಗುರು ಅಭಿಷೇಕ ಹಾಲಸ್ವಾಮಿಗಳು ನೆರವೇರಿಸಿದರು ಪ್ರಾಸ್ತಾವಿಕವಾಗಿ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ ಸಿ ಪರಶುರಾಮ್ ಅಂಗೂರ್ ಮಾತನಾಡಿದರು. ಅದ್ಯಕ್ಷತೆ ಹಿರಿಯ ಸಂಗೀತ ಶಿಕ್ಷಕ ಎ ಉಮಾಪತಿ ವಹಿಸಿದ್ದರು.
ಜಾನಪದ ಕಲೆಗಳ ವಿಚಾರ ಸಂಕಿರಣದಲ್ಲಿ ಆಧುನಿಕ ಯುಗದಲ್ಲಿ ಜಾನಪದ ಸಾಹಿತ್ಯ ಎಂಬ ವಿಷಯ ಕುರಿತು ಉಪನ್ಯಾಸವನ್ನು ಶಿಕ್ಷಕ ಸಿಎನ್ ಸೋಮೇಶಪ್ಪ ನಡೆಸಿಕೊಟ್ಟರು. ಹಂತಿ ಪದಗಳು ಬಿ ಬಾಸು ಸಾಹೇಬ್ ಜಾನಪದ ಗೀತೆಗಳು ಕೆ ಅಶೋಕ್ ಕಟ್ಟಿಮನಿ ಗಂಗಪ್ಪ ಕುಮಾರಿ ಚಂದ್ರಮ್ಮ ನಡೆಸಿಕೊಟ್ಟರು ಆರಂಭದಲ್ಲಿ ಶಿಕ್ಷಕ ಕರಿಯಪ್ಪ ಸ್ವಾಗತಿಸಿ ನಿರೂಪಿಸಿದರು ಕೊನೆಯಲ್ಲಿ ಗೀತಾ ವಂದಿಸಿದರು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 