ವಿದ್ಯಾರ್ಥಿಗಳಲ್ಲಿ ಆಹಾರ ಮೇಳ ವ್ಯಾಪಾರ ಕೌಶಲ್ಯ ಬೆಳೆಸುತ್ತವೆ : ಶ್ರೀ.ಎಂ.ಎಸ್.ಮಠ
ಹುನಗುಂದ06: ವಿ.ಎಂ.ಕೆ.ಎಸ್.ಆರ್.ವಸ್ತ್ರದ ಕಲಾ, ವಿಜ್ಞಾನ ಹಾಗೂ ವಿ.ಎಸ್.ಬೆಳ್ಳಿಹಾಳ ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಮಹಿಳಾ ವೇದಿಕೆಯ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ದೇಶೀ ತಿನಿಸುಗಳನ್ನು ಪರಿಚಯಿಸುವ ಉದ್ದೇಶದಿಂದ ಆಹಾರ ಮೇಳವನ್ನು ಫೆ.03ರಂದು ಆಯೋಜಿಸಲಾಗಿತ್ತು. ಮೇಳದಲ್ಲಿ ವಿದ್ಯಾರ್ಥಿ/ನಿಯರು ಸೇರಿ ಒಟ್ಟು 14 ಆಹಾರ ಮಳಿಗೆಗಳನ್ನು ಸಿದ್ಧಪಡಿಸಿದ್ದರು. ಈ ಮೇಳವನ್ನು ವಿ.ಮ.ವಿ.ವ ಸಂಘದ ನಿರ್ದೇಶಕರಾದ ಎಂ.ಆಯ್.ಕತ್ತಿ ಹಾಗೂ ಎಂ.ಎಸ್.ಮಠ ಅವರು ಉದ್ಘಾಟಿಸಿ ತಿನಿಸುಗಳ ರುಚಿಯನ್ನು ಸವಿದು ವಿದ್ಯಾರ್ಥಿಗಳ ಸಾಧನೆಗಳನ್ನು ಶ್ಲ್ಯಾಘಿಸಿದರು. ಎಂ.ಎಸ್.ಮಠ ಅವರು ಮಾತನಾಡುತ್ತ ಇಂತಹ ಮೇಳ ವಿದ್ಯಾರ್ಥಿಗಳಲ್ಲಿ ಮಾರಾಟ ಹಾಗೂ ಸಂಪರ್ಕ ಕೌಶಲ್ಯಗಳನ್ನು ಬೆಳೆಸುತ್ತದೆ ಎಂದು ಹೇಳಿ ಇದನ್ನು ಮುಂದುವರೆಸಿಕೊಂಡು ಹೋಗುವಂತೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಪ್ರೊ.ಶಶಿಕಲಾ ಮಠ, ಮಹಿಳಾ ವೇದಿಕೆಯ ಸಂಚಾಲಕರಾದ ಪ್ರೊ. ಎಸ್.ಬಿ.ಅಮಲಿಕೊಪ್ಪ, ಪದವಿ, ಪದವಿ-ಪೂರ್ವ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿ/ನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆಹಾರ ಮೇಳವನ್ನು ಯಶಸ್ವಿಗೊಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 