ಎಂಪಿಪಿ ಸಮಾಜ ಮುಖಿ ಟ್ರಸ್ಟ್ನಿಂದ ಆಹಾರ ಧಾನ್ಯ ವಿತರಣೆ
ಲೋಕದರ್ಶನ ವರದಿ
ಹೂವಿನಹಡಗಲಿ10: ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ದಿವಂಗತ ಶ್ರೀ ಎಂ.ಪಿ.ರವೀಂದ್ರ ರವರ 51 ನೇ ಜನ್ಮದಿನಾಚರಣೆ ಪ್ರಯುಕ್ತ ರಂಗಭಾರತಿ ಹಾಗೂ ಶ್ರೀ ಎಂ.ಪಿ.ಪ್ರಕಾಶ ಸಮಾಜಮುಖಿ ಟ್ರಸ್ಟ್ ಹೂವಿನಹಡಗಲಿ. ವತಿಯಿಂದ ಕರೋನ ವೈರಾಣು ಹರಡುವಿಕೆ ತಡೆಗಟ್ಟಲು ನಿರಂತರವಾಗಿ ಶ್ರಮಿಸುತ್ತಿರುವ ಹೂವಿನಹಡಗಲಿ ಪುರಸಭೆಯ ಪೌರಕಾಮರ್ಿಕರಿಗೆ, ಬಡವರಿಗೆ ಹಾಗೂ ನಿರಾಶ್ರಿತರಿಗೆ ಉಚಿತ ಆಹಾರ ಧಾನ್ಯ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಎಂ.ಪಿ.ಪ್ರಕಾಶ ಸಮಾಜಮುಖಿ ಟ್ರಸ್ಟ್ನ ಅಧ್ಯಕ್ಷರು ಹಾಗೂ ರಂಗಭಾರತಿಯ ಕೋಶಾಧ್ಯಕ್ಷರಾದ ಶ್ರೀಮತಿ ಎಂ.ಪಿ.ವೀಣಾ ಮಹಾಂತೇಶ್ ಹಾಗೂ ಬೆಂಗಳೂರಿನ ತಥಾಗತ್ ಹೃದಯ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಮಹಾಂತೇಶ ಚರಂತಿಮಠ್ ಮುಖಂಡ ಕೋಡಿಹಳ್ಳಿ ಮುದುಕಪ್ಪ, ಪುರಸಭೆಯ ಮಾಜಿ ಅಧ್ಯಕ್ಷ ಕೋಡಿಹಳ್ಳಿ ಕೊಟ್ರೇಶ್ ಮಾಜಿ ತಾಲೂಕು ಪಂಚಾಯ್ತಿ ಸದಸ್ಯ ಶಿವರಾಜ್. ಮಾಜಿ ಪುರಸಭೆ ಸದಸ್ಯ ಸಂತೋಷ್ ಜೈನ್, ಯುವಮುಖಂಡರಾದ ಬಾವಿಮನಿ ಕೊಟ್ರೇಶ್, ಕೆ.ಶಂಕ್ರಪ್ಪ ಕರಿಯೆತ್ತಿನ ಕೊಟ್ರೇಶ, ಭಾವಿಹಳ್ಳಿ ಬಸವರಾಜ, ರಂಗಭಾರತಿ ಸದಸ್ಯರಾದ ಪಿ.ಎಂ.ಕೊಟ್ರಸ್ವಾಮಿ ಮಂಜುನಾಥ ಪಾಟೀಲ್, ಕೆ.ಜಯಣ್ಣ, ಡಿ.ಜಗದೀಶ, ಮಧು ಸೊಪ್ಪಿನ್, ಟಿ.ಎಂ.ನಾಗಭೂಷಣ ಮತ್ತು ಕೊವಿಡ್ 19 ಸ್ವಯಂ ಸೇವಕರು ಹಾಗೂ ಪುರಸಭೆಯ ಸಿಬ್ಬಂಧಿ ವರ್ಗದವರು ಪಾಲ್ಗೊಂಡಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 