ಶಿಕ್ಷಣ ಜ್ಞಾನಕ್ಕಾಗಿಯೇ ಹೊರತು ವ್ಯಕ್ತಿ ಆರಾಧನೆಗಾಗಿ ಅಲ್ಲ: ಡಾ.ಸಿ.ಎನ್ ಅಶ್ವತ್ಥನಾರಾಯಣ
ಬೆಂಗಳೂರು, ಡಿ.28 ದೇಶದಲ್ಲಿ ನಡೆಯುವ ಎಲ್ಲಾ ಸಂಶೋಧನೆಗಳು ತಿಳುವಳಿಕೆ ಹೆಚ್ಚಿಸುವ ನಿಟ್ಟಿನಲ್ಲಿರಬೇಕೇ ಹೊರತು ಮೆಚ್ಚುಗೆಯ ಸಂಶೋಧನೆಯಾಗಬಾರದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದ ಪ್ರತಿಷ್ಠಿತ ಕಮ್ಯುನಿಟಿ ಸೆಂಟರ್ ಆಫ್ ಎಜ್ಯುಕೇಷನ್ ಇನ್ಸ್ಟಿಟ್ಯೂಟ್ ನ ವಜ್ರಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, "ಶಿಕ್ಷಣ ಜ್ಞಾನಕ್ಕಾಗಿ ಇರಬೇಕೇ ಹೊರತು ವ್ಯಕ್ತಿ ಆರಾಧನೆಗಾಗಿ ಅಲ್ಲ. ಜ್ಞಾನಾರ್ಜನೆ ನಿರಂತರ ಪ್ರಕ್ರಿಯೆಯಾಗಿದ್ದು, ಸರಳ ಶಿಕ್ಷಣಕ್ಕೆ ನಾವೆಲ್ಲರೂ ಆದ್ಯತೆ ನೀಡಬೇಕು ಎಂದು ಅವರು ಕರೆ ನೀಡಿದರು. ವಿಶ್ವದಾದ್ಯಂತ ನಡೆಯುವ ಸಂಶೋಧನೆಗಳು ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿ ಇರಬೇಕು. ಯಾರನ್ನೋ ಮೆಚ್ಚಿಸುವ ರೀತಿಯಲ್ಲಿ ಇರಬಾರದು. ತಿಳುವಳಿಕೆ ಹೆಚ್ಚಿಸುವ ಸಂಶೋಧನೆಗಳಿಗೆ ಶಿಕ್ಷಣ ಸಂಸ್ಥೆಗಳು ಸಹಾಯ ಮಾಡಬೇಕು. "ಶಿಕ್ಷಣ ಕೇವಲ ಪದವಿಗೆ ಸೀಮಿತವಾಗಿರದೆ ಜ್ಞಾನಾರ್ಜನೆಗೆ ಆಧ್ಯತೆಯಾಗಬೇಕು. ಕಮ್ಯುನಿಟಿ ಸೆಂಟರ್ ಜ್ಞಾನಾರ್ಜನೆಯ ದಾರಿಯಲ್ಲಿ ಕೆಲಸ ಮಾಡುತ್ತಿದೆ. ಪ್ರತಿಯೊಬ್ಬರ ಬದುಕು ರೂಪಿಸಲು ಶಿಕ್ಷಣ ನೆರವಾಗಲಿ. ಪ್ರತಿಯೊಬ್ಬರ ಭಾವನೆಗಳಿಗೆ ಪೂರಕವಾದ ಶಿಕ್ಷಣ ಲಭ್ಯವಾಗುವಂತೆ ಮಾಡೋಣ. ಸರ್ಕಾರದ ವತಿಯಿಂದ ನಾವು ನಮ್ಮ ಪ್ರಯತ್ನ ನಾವು ಮಾಡ್ತೇವೆ. ಇದಕ್ಕೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಸಹಕಾರ ಬೇಕು ಎಂದು ಅವರು ಹೇಳಿದರು. ಶಾಂತಿ, ನೆಮ್ಮದಿ ಹಾಗೂ ಸಮಾಧಾನ ಕಲಿಸುವ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಕಮ್ಯುನಿಟಿ ಸೆಂಟರ್ ಆಫ್ ಎಜುಕೇಷನ್ ಇನ್ಸ್ಟಿಟ್ಯೂಟ್ ಗೆ ಅಭಿನಂದನೆ ಸಲ್ಲಿಸುತ್ತೇನೆ," ಎಂದು ಡಾ ಅಶ್ವತ್ಥನಾರಾಯಣ ಹೇಳಿದರು. ಸಮಾರಂಭದಲ್ಲಿ ಶಾಸಕ ರಾಮಲಿಂಗಾರೆಡ್ಡಿ, ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಸಂಸ್ಥೆಯ ಅಧ್ಯಕ್ಷ ಕೆ.ಎಂ.ನಾಗರಾಜ್ ಹಾಗೂ ಆಡಳಿತ ಮಂಡಳಿಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 