ಅಧಿಕಾರಿಗಳಿಗೆ ತರಬೇತಿ ನೀಡಲು ಒತ್ತಾಯ
ಲೋಕದರ್ಶನ ವರದಿ
ಬೆಳಗಾವಿ : ಎಸ್ಸಿಎಸ್ಪಿ-ಟಿಎಸ್ಪಿ ಯೋಜನೆ ಮತ್ತು ಕಾಯ್ದೆಯ ಕುರಿತು 42 ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕಾಧಿಕಾರಿಗಳಿಗೆ ತರಬೇತಿ ನೀಡಬೇಕೆಂದು ಒತ್ತಾಯಿಸಿ ಶುಕ್ರವಾರ ಎಸ್ಸಿಎಸ್ಪಿ, ಟಿಎಸ್ಪಿ ಜನಜಾಗೃತಿ ವೇದಿಕೆಯವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಶುಕ್ರವಾರ ದಿನದಂದು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ವೇಧಿಕೆ ಪದಾಧಿಕಾರಿಗಳು ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿಯೊಂದನ್ನು ಸಲ್ಲಿಸಿ, ರಾಜ್ಯದಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ಕಾಯ್ದೆಯು 2013-14ರಲ್ಲಿಯೇ ಜಾರಿಗೆ ಬಂದಿದ್ದು, ಈ ಕಾಯ್ದೆ ಜಾರಿಗೆ ಬಂದು 5 ವರ್ಷಗಳು ಕಳೆದರೂ ಕಾಯ್ದೆಯ ಕುರಿತು ಅಧಿಕಾರಿಗಳಲ್ಲಿ ಸೂಕ್ತ ಮಾಹಿತಿ ಇಲ್ಲ. ಹೀಗಾಗಿ ಯೋಜನೆಯಡಿ ಸಿಗುವ ಸೌಲಭ್ಯಗಳು ಫಲಾನುಭವಿಗಳಿಗೆ ಸಿಗುತ್ತಿಲ್ಲ. ಆದ್ದರಿಂದ ಅಧಿಕಾರಿಗಳಿಗೆ ಯೋಜನೆಯ ಬಗ್ಗೆ ತರಬೇತಿ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಮಹೇಶ ಕೋಲಕಾರ, ಸುನೀಲ ಬಸ್ತವಾಡಕರ, ಸುನೀಲ ಕೋಲಕಾರ, ಶೋಭಾ ಕಿಣಗಿ, ವೈಶಾಲಿ ಕಮ್ಮಾರ, ಲಕ್ಷ್ಮೀ ಗೊರವ, ವಿಠ್ಠಲ ತಳವಾರ, ಲಕ್ಷ್ಮಣ ಗೊರವ, ಮಹಾನಂದ ತಳವಾರ, ಪರಶುರಾಮ ಕೋಲಕಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 