ಅಧಿಕಾರಿಗಳಿಗೆ ತರಬೇತಿ ನೀಡಲು ಒತ್ತಾಯ
ಲೋಕದರ್ಶನ ವರದಿ
ಬೆಳಗಾವಿ : ಎಸ್ಸಿಎಸ್ಪಿ-ಟಿಎಸ್ಪಿ ಯೋಜನೆ ಮತ್ತು ಕಾಯ್ದೆಯ ಕುರಿತು 42 ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕಾಧಿಕಾರಿಗಳಿಗೆ ತರಬೇತಿ ನೀಡಬೇಕೆಂದು ಒತ್ತಾಯಿಸಿ ಶುಕ್ರವಾರ ಎಸ್ಸಿಎಸ್ಪಿ, ಟಿಎಸ್ಪಿ ಜನಜಾಗೃತಿ ವೇದಿಕೆಯವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಶುಕ್ರವಾರ ದಿನದಂದು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ವೇಧಿಕೆ ಪದಾಧಿಕಾರಿಗಳು ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿಯೊಂದನ್ನು ಸಲ್ಲಿಸಿ, ರಾಜ್ಯದಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ಕಾಯ್ದೆಯು 2013-14ರಲ್ಲಿಯೇ ಜಾರಿಗೆ ಬಂದಿದ್ದು, ಈ ಕಾಯ್ದೆ ಜಾರಿಗೆ ಬಂದು 5 ವರ್ಷಗಳು ಕಳೆದರೂ ಕಾಯ್ದೆಯ ಕುರಿತು ಅಧಿಕಾರಿಗಳಲ್ಲಿ ಸೂಕ್ತ ಮಾಹಿತಿ ಇಲ್ಲ. ಹೀಗಾಗಿ ಯೋಜನೆಯಡಿ ಸಿಗುವ ಸೌಲಭ್ಯಗಳು ಫಲಾನುಭವಿಗಳಿಗೆ ಸಿಗುತ್ತಿಲ್ಲ. ಆದ್ದರಿಂದ ಅಧಿಕಾರಿಗಳಿಗೆ ಯೋಜನೆಯ ಬಗ್ಗೆ ತರಬೇತಿ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಮಹೇಶ ಕೋಲಕಾರ, ಸುನೀಲ ಬಸ್ತವಾಡಕರ, ಸುನೀಲ ಕೋಲಕಾರ, ಶೋಭಾ ಕಿಣಗಿ, ವೈಶಾಲಿ ಕಮ್ಮಾರ, ಲಕ್ಷ್ಮೀ ಗೊರವ, ವಿಠ್ಠಲ ತಳವಾರ, ಲಕ್ಷ್ಮಣ ಗೊರವ, ಮಹಾನಂದ ತಳವಾರ, ಪರಶುರಾಮ ಕೋಲಕಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 