ಅಧಿಕಾರಿಗಳಿಗೆ ತರಬೇತಿ ನೀಡಲು ಒತ್ತಾಯ
ಲೋಕದರ್ಶನ ವರದಿ
ಬೆಳಗಾವಿ : ಎಸ್ಸಿಎಸ್ಪಿ-ಟಿಎಸ್ಪಿ ಯೋಜನೆ ಮತ್ತು ಕಾಯ್ದೆಯ ಕುರಿತು 42 ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕಾಧಿಕಾರಿಗಳಿಗೆ ತರಬೇತಿ ನೀಡಬೇಕೆಂದು ಒತ್ತಾಯಿಸಿ ಶುಕ್ರವಾರ ಎಸ್ಸಿಎಸ್ಪಿ, ಟಿಎಸ್ಪಿ ಜನಜಾಗೃತಿ ವೇದಿಕೆಯವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಶುಕ್ರವಾರ ದಿನದಂದು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ವೇಧಿಕೆ ಪದಾಧಿಕಾರಿಗಳು ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿಯೊಂದನ್ನು ಸಲ್ಲಿಸಿ, ರಾಜ್ಯದಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ಕಾಯ್ದೆಯು 2013-14ರಲ್ಲಿಯೇ ಜಾರಿಗೆ ಬಂದಿದ್ದು, ಈ ಕಾಯ್ದೆ ಜಾರಿಗೆ ಬಂದು 5 ವರ್ಷಗಳು ಕಳೆದರೂ ಕಾಯ್ದೆಯ ಕುರಿತು ಅಧಿಕಾರಿಗಳಲ್ಲಿ ಸೂಕ್ತ ಮಾಹಿತಿ ಇಲ್ಲ. ಹೀಗಾಗಿ ಯೋಜನೆಯಡಿ ಸಿಗುವ ಸೌಲಭ್ಯಗಳು ಫಲಾನುಭವಿಗಳಿಗೆ ಸಿಗುತ್ತಿಲ್ಲ. ಆದ್ದರಿಂದ ಅಧಿಕಾರಿಗಳಿಗೆ ಯೋಜನೆಯ ಬಗ್ಗೆ ತರಬೇತಿ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಮಹೇಶ ಕೋಲಕಾರ, ಸುನೀಲ ಬಸ್ತವಾಡಕರ, ಸುನೀಲ ಕೋಲಕಾರ, ಶೋಭಾ ಕಿಣಗಿ, ವೈಶಾಲಿ ಕಮ್ಮಾರ, ಲಕ್ಷ್ಮೀ ಗೊರವ, ವಿಠ್ಠಲ ತಳವಾರ, ಲಕ್ಷ್ಮಣ ಗೊರವ, ಮಹಾನಂದ ತಳವಾರ, ಪರಶುರಾಮ ಕೋಲಕಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 