ತಿಮ್ಮಕ್ಕ ವೃಕ್ಷೋದ್ಯಾನದಲ್ಲಿ ವನಮಹೋತ್ಸವ
Forest Festival at Thimmakka Arboretum
ಮುದ್ದೇಬಿಹಾಳ 19: ಬಾವೋಬಾಬ್ ಮರಗಳು ಅತೀ ದೀರ್ಘ ಕಾಲದ ಆಯುಷ್ಯ ಹೊಂದಿದ್ದು, ಅವುಗಳ ನೆಡುವಿಕೆಯಿಂದ ಅಂತರ್ಜಲ ಹೆಚ್ಚಲಿದೆ ಎಂದು ತಾಲ್ಲೂಕು ವಲಯ ಅರಣ್ಯಾಧಿಕಾರಿ ಬಸನಗೌಡ ಬಿರಾದಾರ ಹೇಳಿದರು.
ಅವರು ಬುಧವಾರ, ಬಿದರಕುಂದಿ ಬೆಟ್ಟದಲ್ಲಿರುವ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ವೃಕ್ಷೋದ್ಯಾನದಲ್ಲಿ ಗಿಡಗಳನ್ನು ನೆಡುವ ಹಾಗೂ ಅದರ ಸೌಂದರ್ಯ ಹೆಚ್ಚಿಸುವ ಕಾರ್ಯ ಸಮರೋಪಾದಿಯಲ್ಲಿ ನಡೆದಿದೆ ಎಂದರು.
ಅರಣ್ಯ ಇಲಾಖೆಯ ಸಹಾಯಕ ವಲಯ ಅರಣ್ಯಾಧಿಕಾರಿ, ರಾಜೇಂದ್ರ ಹುನ್ನೂರ, ಅರಣ್ಯ ಇಲಾಖೆಯ ವಿಠ್ಠಲ ಬೋರಟಗಿ, ವಿಜಯಕುಮಾರ್ ಕಿತ್ತೂರ, ಯಲಗೂರ್ಪ, ಹಸಿರು ತೋರಣ ಬಳಗದ ಅಧ್ಯಕ್ಷ ಬಿ.ಎಚ್.ಬಳಬಟ್ಟಿ, ಕಾರ್ಯದರ್ಶಿ ಅಮರೇಶ ಗೂಳಿ, ಸಂಚಾಲಕ ಮಹಾಬಲೇಶ್ವರ ಗಡೇದ, ತಾಲ್ಲೂಕು ಪಂಚಾಯತ ಮಾಜಿ ಸದಸ್ಯ ಶ್ರೀಶೈಲ ಮರೋಳ, ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ, ಅಶೋಕ ರೇವಡಿ, ರವಿ ಗೂಳಿ, ಸದಸ್ಯರಾದ ಮಲ್ಲಿಕಾರ್ಜುನ ಬಾಗೇವಾಡಿ, ಸುರೇಶ ಕಲಾಲ, ವಿಲಾಸರಾವ್ ದೇಶಪಾಂಡೆ, ವೆಂಕನಗೌಡ ಪಾಟೀಲ, ಅಮರೇಶ ಐಹೊಳೆ, ಕಿರಣ ಪಾಟೀಲ, ವಿನಯ ಹಿರೇಮಠ, ಮಹಾಂತೇಶ ಬಸನಗೌಡ್ರ, ಈರಯ್ಯ ಮಠ, ಆದೇಶ ಕೋಳೂರ, ರೇಶ್ಮಾ ಮಾಳನೂರ ಬಿದರಕುಂದಿ, ಸೀತಿಮನಿ, ಚಿಕ್ಕ ನರಗುಂದ, ಮತ್ತಿತರರು ಇದ್ದರು. ಪರಮಾನಂದ ಪಾಟೀಲ ಪ್ರಾರ್ಥಿಸಿದರು. ಮಹಾಬಲೇಶ್ವರ ಗಡೇದ ಸ್ವಾಗತಿಸಿ, ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 