ಬಲೆಗೆ ಬಿದ್ದ ಜಿಂಕೆ ಅರಣ್ಯ ಸಿಬ್ಬಂದಿ ರಕ್ಷಣೆ
Forest staff rescues deer caught in trap
ಮುಂಡಗೋಡ 04: ತಾಲೂಕಿನ ಸನವಳ್ಳಿ ಬಳಿಯ ಬಪ್ಪನ ಕಟ್ಟಿಯಲ್ಲಿನ ಹೊಲದ ಬಲೆಯ ಬೇಲಿಗೆ ಜಿಂಕೆಯೊಂದು ಸಿಲುಕಿಸಿಕೊಂಡು ಪ್ರಾಣಭಯದಿಂದ ಒದ್ದಾಡುತ್ತಿದ್ದಾಗ ಗ್ರಾಮಸ್ಥರ ಸಹಾಯದಿಂದ ಬಲೆಗೆ ಬಿದ್ದ ಜಿಂಕೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.
ಬಸವರಾಜ ಶೇರವಾಡ ಎಂಬುವರು ಬೆಳೆ ರಕ್ಷಣೆಗೆ ತಮ್ಮ ಗದ್ದೆಯ ಸುತ್ತಲೂ ಬಲೆಯ ಬೇಲಿ ಹಾಕಿದ್ದಾರೆ. ಆಕಸ್ಮಿಕವಾಗಿ ಜಿಂಕೆಯೊಂದು ಆಹಾರ ಹುಡುಕುತ್ತಾ ಬಂದ ವೇಳೆಗೆ ಜಿಂಕೆಯ ಕೋಡು ಬೇಲಿಯ ಬಲಿಗೆ ಸಿಲುಕಿಕೊಂಡಿತ್ತು. ತಕ್ಷಣವೇ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ರಾಜು ಪರೇಟ್ ಮತ್ತು ಕೃಷ್ಣಾ ಬಲೆಯಿಂದ ರಕ್ಷಿಸಿ ಸುರಕ್ಷಿತವಾಗಿ, ಕಾಡಿಗೆ ಬಿಟ್ಟಿದ್ದಾರೆ.ಸ್ಥಳೀಯರಾದ ರಾಜು ಗುಬ್ಬಕ್ಕನವರ ರಾಘು ಕೋಣನಕೇರಿ ಹಾಗೂ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 