ಒಳ ಮೀಸಲಾತಿ ಏಕ ಸದಸ್ಯ ಆಯೋಗ ರಚನೆ
Formation of a single-member commission on internal reservation
ಒಳ ಮೀಸಲಾತಿ ಏಕ ಸದಸ್ಯ ಆಯೋಗ ರಚನೆ
ರಾಯಬಾಗ 04: ಮೇ.5 ರಿಂದ ಆರಂಭವಾಗಲಿರುವ ಒಳ ಮಿಸಲಾತಿ ಸಮೀಕ್ಷೆಯಲ್ಲಿ ಭಜಂತ್ರಿ ಸಮುದಾಯದವರು ಮೂಲ ಜಾತಿ ಕೊರವ, ಕೊರವರ, ಕೊರಮಾ ಇದರಲ್ಲಿ ಯಾವುದಾದರೊಂದು ಬರೆಸಬೇಕೆಂದು ಕಿತ್ತೂರ ಕರ್ನಾಟಕದ ಅಖಿಲ ಕರ್ನಾಟಕ ಕುಳುವ ಮಹಾಸಂಘದ ರಾಜ್ಯ ಉಪಾಧ್ಯಕ್ಷ ಹನುಮಂತ ಭಜಂತ್ರಿ ಹೇಳಿದರು.
ಭಾನುವಾರ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಸರ್ಕಾರ ಒಳ ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚಿಸಿದೆ. 101 ಪರಿಶಿಷ್ಟ ಉಪ ಜಾತಿಗಳ ಸ್ಥಿತಿಗತಿಗಳ ದತ್ತಾಂಶ ಸಂಗ್ರಹಿಸಲು ಮನೆ ಮನೆ ಸಮೀಕ್ಷೆ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಆಯೋಗವು ಪರಿಶಿಷ್ಟ ಜಾತಿಯ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಅಧ್ಯಯನ ಮಾಡಲು ಮುಂದಾಗಿದೆ ಎಂದು ತಿಳಿಸಿದರು. ಕಾರಣ ಭಜಂತ್ರಿ ಜನಾಂಗದವರು ತಮ್ಮ ಮೂಲ ಜಾತಿ ನಮೂದಿಸಬೇಕೆಂದು ತಿಳಿಸಿದರು. ಸಮಾಜದ ಮುಖಂಡರಾದ ಶಿವಪ್ಪ ಭಜಂತ್ರಿ ಮಾಯಪ್ಪ ಭಜಂತ್ರಿ, ಮಹಾದೇವ ಮಲಾಜೂರೆ, ಗೋವಿಂದ ಭಜಂತ್ರಿ, ರಾಜು ಭಜಂತ್ರಿ, ರಂಜಿತ ಭಜಂತ್ರಿ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 