ಮಾಜಿ ಶಾಸಕ ಸೈಯದ್ ಅಜ್ಜಂಪಿರ್ ಖಾದ್ರಿ ಹುಟ್ಟು ಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
Former MLA Syed Ajjampir Qadri's birthday: Fruits and sweets distributed to patients
ಶಿಗ್ಗಾವಿ 02 : ಮಾಜಿ ಶಾಸಕ ಹಾಗೂ ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪಿರ್ ಖಾದ್ರಿ ಅವರ 61ನೇ ಹುಟ್ಟು ಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಹಜರತ್ ಅಲಿ ಚೂಡಿಗಾರ ಮಾತನಾಡಿ ಅವರು ಮಾಜಿ ಶಾಸಕ ಹಾಗೂ ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪಿರ್ ಖಾದ್ರಿಯವರು ಜಾತ್ಯತೀತ ನಾಯಕರು, ಕ್ಷೇತ್ರದ ಎಲ್ಲ ವರ್ಗದ ಜನರ ಆಶಾಕಿರಣವೂ ಆಗಿರುವ ನಮ್ಮ ನಾಯಕರಿಗೆ ಆ ದೇವರು ಹೆಚ್ಚಿನ ಆರೋಗ್ಯ ಭಾಗ್ಯವನ್ನು, ಇನ್ನೂ ಹೆಚ್ಚಿನ ರಾಜಕೀಯ ಸ್ಥಾನ ಮಾನಗಳು ಲಭಿಸಲಿ ಎಂದು ಶುಭ ಹಾರೈಸಿದರು.
ಈ ಸಂಧರ್ಭದಲ್ಲಿ ಮುಖಂಡರಾದ ರಹಿಂ ಮಲ್ಲೂರ, ರಫೀಕ ನಧಾಫ್, ಶಾರುಖ್ ಚಪದಾರ, ಹಜರೆಸಾಬ್ ಕೌತಾಳ, ರವಿ ಕೋಣಪ್ಪನವರ, ಶಂಕರಗೌಡ ಪಾಟೀಲ್ ಮಹ್ಮದ ಗೌಸ್ ತೋಖಲ್ಲಿ, ಸಾಧಿಕ್ ಸಂಶಿ, ಕೃಷ್ಣಾ ಮುಳೆ, ಗೌಸ್ ಅಗಸನಮಮಟ್ಟಿ, ಮಾಲಿಂಗಪ್ಪ ಕುಂಬಾರ, ಮಂಜುನಾಥ ಕಂಕನವಾಡ, ಗಣೇಶ ಮಲಸಾಲಿ, ಮನ್ಸುಲ್ ಯಲ್ಲಾಪೂರ ಸೇರಿದಂತೆ ಖಾದ್ರಿಯವರ ಅಭಿಮಾನಿ ಬಳಗದವರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 