ರಾಜ್ಯಸಭೆಯಲ್ಲಿ ಮಾಜಿ ಸಂಸದ ಎ.ವಿ.ಸ್ವಾಮಿ ಅವರಿಗೆ ಶ್ರದ್ಧಾಂಜಲಿ
ನವದೆಹಲಿ, ಮಾ 2, ರಾಜ್ಯಸಭಾ ಸದಸ್ಯರು ಸೋಮವಾರ ಮಾಜಿ ಸದಸ್ಯರಾದ ಅಲಜಂಗಿ ವೀರಭದ್ರ ಸ್ವಾಮಿ ಅವರಿಗೆ ಗೌರವ ಶ್ರದ್ಧಾಂಜಲಿ ಸಲ್ಲಿಸಿದರು. ಬೆಳಗ್ಗೆ 11ಕ್ಕೆ ಸದನ ಆರಂಭಗೊಳ್ಳುತ್ತಿದ್ದಂತೆ 2019ರ ಡಿ.31ರಂದು ನಿಧನರಾದ ಸ್ವಾಮಿ ಕುರಿತು ಸಭಾಪತಿ ಎಂ.ವೆಂಕಯ್ಯನಾಯ್ಡು ಮಾಹಿತಿ ನೀಡಿದರು. ಸ್ವಾಮಿ ಅವರು 2012ರ ಏಪ್ರಿಲ್ ನಿಂದ 2018ರ ಏಪ್ರಿಲ್ ನವರೆಗಿನ ಅವಧಿಗೆ ಒಡಿಶಾದಿಂದ ಮೇಲ್ಮನೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಸ್ವಾಮಿ ಅವರು ಅತ್ಯುತ್ತಮ ಸಂಸದ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದರು ಎಂದ ನಾಯ್ಡು, ಅವರು ಸ್ವಾತಂತ್ರ್ಯ ಹೋರಾಟದಲ್ಲೂ ಪಾಲ್ಗೊಂಡಿದ್ದರು ಎಂದು ಸ್ಮರಿಸಿದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 