ಮಾಜಿ ಪ್ರಧಾನಿ, ಕವಿ ವಾಜಪೇಯಿ ನಿಧನಕ್ಕೆ ಮರುಗಿದ ಬಾಲಿವುಡ್
ಮುಂಬಯಿ : 93ರ ಹರೆಯದಲ್ಲಿ ಇಂದು ಅಸ್ತಂಗತರಾದ ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಬಾಲಿವುಡ್ ಮರುಗಿದೆ.
ಬಾಲಿವುಡ್ ಗಾನ ಕೋಗಿಲೆ ಎಂದೇ ಖ್ಯಾತಿವೆತ್ತಿರುವ ಭಾರತ ರತ್ನ ಲತಾ ಮಂಗೇಶ್ಕರ್ ಅವರು "ನನ್ನ ತಂದೆ ನಿಧನ ಹೊಂದಿದ್ದಾಗ ನನಗೆ ಎಷ್ಟು ನೋವಾಗಿತ್ತೋ ಅಷ್ಟೇ ನೋವು ಈಗ ವಾಜಪೇಯಿ ನಿಧನದಿಂದ ಆಗಿದೆ' ಎಂದು ದುಃಖೀಸಿದ್ದಾರೆ.ಅಗಲಿದ ವಾಜಪೇಯಿ ಅವರ ಆತ್ಮಕ್ಕೆ ಭಗವಂತನು ಚಿರ ಶಾಂತಿ ಕರುಣಿಸಲೆಂದು ಪ್ರಾಥರ್ಿಸುತ್ತೇನೆ ಎಂದು ಹೇಳಿದ್ದಾರೆ.
ತಮಿಳು ಮೆಗಾಸ್ಟಾರ್ ರಜನಿಕಾಂತ್ ಅವರು ವಾಜಪೇಯಿ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ವಾಜಪೇಯಿ ನಿಧನದೊಂದಿಗೆ ಒಂದು ಯುಗವೇ ಅಂತ್ಯಗೊಂಡಿತು ಎಂದು ಲೇಖಕ ನಟ ಸುಹೇಲ್ ಸೇಟ್ ಹೇಳಿದ್ದಾರೆ.
ವಾಜಪೇಯಿ ಅವರಂತೆ ನಮ್ಮ ಎಲ್ಲ ಹಿರಿಯರು, ನಾಯಕರು ಇರಬೇಕೆಂದು ನಾವು ಸದಾ ಇಷ್ಟಪಡುತ್ತೇವೆ; ಅಂತಹ ಮಹೋನ್ನತ ವ್ಯಕ್ತಿ ತೀರಿಕೊಂಡದ್ದಕ್ಕೆ ದುಃಖವಾಗಿದೆ' ಎಂದು ಸೋನಾ ಮೋಹಪಾತ್ರ ಹೇಳಿದ್ದಾರೆ.
ಖ್ಯಾತ ಲೇಖಕ ಚೇತನ್ ಭಗತ್, ನಟ ಬೋಮನ್ ಇರಾನಿ, ವಿವೇಕ್ ಆನಂದ್ ಒಬೆರಾಯ್, ಧನುಷ್, ರಣದೀಪ್ ಹೂಡ, ಕೈಲಾಶ್ ಖೇರ್ ಮೊದಲಾದವರು ವಾಜಪೇಯಿ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 