ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ

ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ  ನಿಧನ  Former chairman of Vidhan Sabha N. Tippanna passed away

ಬಳ್ಳಾರಿ: ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ (97) ಶುಕ್ರವಾರ ಬೆಳಗಿನ‌ ಜಾವ ನಿಧನ ಹೊಂದಿದರು.

ತಿಪ್ಪಣ್ಣ ಇವರಿಗೆ ಒಬ್ಬ ಪುತ್ರರಿದ್ದಾರೆ. ಇವರ ಅಂತ್ಯ ಸಂಸ್ಕಾರ ಚಿತ್ರದುರ್ಗ ಜಿಲ್ಲೆಯ ತುರವಿನೂರಿನಲ್ಲಿ ಶನಿವಾರ ಜರುಗಲಿದೆ. ಬಳ್ಳಾರಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ರಾಜಕೀಯ ಹಿನ್ನೆಲೆ : ವಕೀಲರಾಗಿ ಕಾರ್ಯ ಆರಂಭಿಸಿ , ನಂತರ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದರು. ನಾಲ್ಕು ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ವಿರೋಧ ಪಕ್ಷದ ಉಪ ನಾಯಕರಾಗಿದ್ದರು. ಅಲ್ಪ ಅವಧಿಗೆ ಸಭಾಪತಿಯಾಗಿ ಕೆಲಸ ಮಾಡಿದ್ದರು. ಜೆಡಿಯುನಲ್ಲಿ ಇದ್ದ ಅವರು ಪಕ್ಷವನ್ನು ಜೆಡಿಎಸ್‌ನಲ್ಲಿ ವಿಲೀನಗೊಳಿಸಿದ ಬಳಿಕ, ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. 2012ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷರಾಗಿ ತಿಪ್ಪಣ್ಣ ಆಯ್ಕೆಯಾಗಿದ್ದರು. ಪ್ರತಿಷ್ಠಿತ ವೀರಶೈವ ವಿದ್ಯಾವರ್ದಕ ಸಂಘದ ಅಧ್ಯಕ್ಷ ಹಾಗೂ ಇನ್ನಿತರ ಹುದ್ದೆಗಳಲ್ಲಿ ಅವರು 20 ವರ್ಷ ಕೆಲಸ ಮಾಡಿದ್ದಾರೆ.