72ನೇ ವಸಂತಕ್ಕೆ ಕಾಲಿಟ್ಟ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ: ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧಾರ
ಬೆಂಗಳೂರು,ಆ 1 ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು 72ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಆದರೆ ರಾಜ್ಯದಲ್ಲಿ ತಲೆ ದೋರಿರುವ ನೆರೆ ಹಾಗೂ ಅತಿವೃಷ್ಟಿಯಿಂದಾಗಿ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ.ಹೀಗಾಗಿ ಸಿದ್ದರಾಮಯ್ಯ ಮನೆ ಕಡೆ ಯಾವೊಬ್ಬ ಕಾಂಗ್ರೆಸ್ ನಾಯಕರೂ ತಲೆ ಹಾಕಿಲ್ಲ.
ಎಡಗಣ್ಣಿಗೆ ಶಸ್ತ್ರಚಿಕಿತ್ಸೆ ಆಗಿರುವ ಕಾರಣ ಮತ್ತು ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಹಾಗೂ ಜನ್ಮ ದಿನ ಸಂಭ್ರಮಾಚರಿಸಿಕೊಳ್ಳದಿರಲು ನಿರ್ಧರಿಸಿರುವ ಸಿದ್ದರಾಮಯ್ಯ, ಮಾಜಿ ಸಚಿವರು,ಶಾಸಕರು,ಬೆಂಬಲಿಗರಿಗೆ ತಮ್ಮ ನಿವಾಸಕ್ಕೆ ಆಗಮಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನನ್ನ ಎಡಗಣ್ಣಿಗೆ ಶಸ್ತ್ರ ಚಿಕಿತ್ಸೆಯಾಗಿದ್ದು, ಯಾರು ಶುಭಾಶಯ ಕೋರಲು ಬರಬೇಡಿ. ಕಣ್ಣಿಗೆ ಸೋಂಕು ತಗುವಲು ಸಾಧ್ಯತೆ ಇದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ.ಆದ್ದರಿಂದ ಇಂದು ಯಾರನ್ನೂ ತಾವು ಭೇಟಿ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಅಭಿಮಾನಿಗಳು ಮತ್ತು ಬೆಂಬಲಿಗರಿಗೆ ಮನವಿ ಮಾಡಿದ್ದಾರೆ.ಇದರಿಂದಾಗಿ ಇಂದು ಯಾವೊಬ್ಬ ನಾಯಕರೂ ಸಿದ್ದರಾಮಯ್ಯ ಅವರ ನಿವಾಸದ ಕಡೆಗೆ ಸುಳಿಯಲಿಲ್ಲ.
ಆದರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಟ್ವೀಟರ್ ಮೂಲಕ ಸಿದ್ದರಾಮಯ್ಯ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.ಸಿದ್ದರಾಮಯ್ಯ ಅವರ ರಾಜಕೀಯ ಗುರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಿದ್ದರಾಮಯ್ಯ ಅವರಿಗೆ ಜನ್ಮ ದಿನದ ಶುಭಾಶಯ ಕೋರಿ,ಸಿದ್ದರಾಮಯ್ಯ ಅವರಿಗೆ ಆಯುರಾರೋಗ್ಯ, ಸುಖ ಸಮೃದ್ಧಿ ನೀಡಲಿ ಎಂದು ಹಾರೈಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆ ಜೆ ಜಾರ್ಜ,ಎಚ್ ಕೆ ಪಾಟೀಲ್, ಎಂ ಬಿ ಪಾಟೀಲ್ ಸೇರಿದಂತೆ ಹಲವಾರು ನಾಯಕರು ಸಿದ್ದರಾಮಯ್ಯ ಅವರು ಹುಟ್ಟು ಹಬ್ಬಕ್ಕೆ ಟ್ವೀಟರ್ ಮೂಲಕ ಶುಭಾಶಯ ಕೋರಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 