ವಂಚನೆ ಆರೋಪ : ಮಾಜಿ ಕ್ರಿಕೆಟಿಗ ಅಜರುದ್ದೀನ್ ವಿರುದ್ಧ ಪ್ರಕರಣ ದಾಖಲು
ಔರಂಗಾಬಾದ್, ಜನವರಿ 23' ಭಾರತದ ತಂಡದ ಮಾಜಿ ನಾಯಕ ಮತ್ತು ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಮತ್ತು ಇತರ ಇಬ್ಬರ ವಿರುದ್ಧ ಟೂರ್ಸ್ ಮತ್ತು ಟ್ರಾವೆಲ್ಸ್ ಏಜೆನ್ಸಿಗೆ 20.96 ಲಕ್ಷ ರೂಪಾಯಿಗೆ ಮೋಸ ಮಾಡಿದ ಆರೋಪದ ಮೇಲೆ ವಂಚನೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಔರಂಗಾಬಾದ್ ಲೇಬರ್ ಕಾಲೋನಿ ನಿವಾಸಿ ಏಜೆನ್ಸಿ ಮೊಹಮ್ಮದ್ ಶಹಾಬ್ ಮೊಹಮ್ಮದ್ ಯಾಕೂಬ್ ಎಂಬುವವರು ಅಜರ್ ವಿರುದ್ದ ದೂರು ನೀಡಿದ್ದಾರೆ. ಪೊಲೀಸರ ಪ್ರಕಾರ, ಮೊಹಮ್ಮದ್ ಅಜರುದ್ದೀನ್ ಅವರ ವೈಯಕ್ತಿಕ ಕಾರ್ಯದರ್ಶಿ ಮುಜೀಬ್ ಖಾನ್ ಡ್ಯಾನಿಶ್ ಟೂರ್ಸ್ ಮತ್ತು ಟ್ರಾವೆಲ್ಸ್ ಏಜೆನ್ಸಿಯನ್ನು ಸಂಪರ್ಕಿಸಿ, ಮುಂಬೈ-ದುಬೈ-ಪ್ಯಾರಿಸ್ ವಿಮಾನಯಾನ ಟಿಕೆಟ್ ಗಳನ್ನು ಸುದೇಶ್ ಅವ್ವೇಕಲ್ (ಕೇರಳ) ಮತ್ತು ಮೊಹಮ್ಮದ್ ಅಜರುದ್ದೀನ್ ಗಾಗಿ ಕಾಯ್ದಿರಿಸಿದ್ದರು. ನವೆಂಬರ್, 2019 ರಲ್ಲಿ. ವಿಮಾನದ ಟಿಕೆಟ್ ಖರೀದಿ ಸಂಬಂದ ಮುಜೀಬ್ ಖಾನ್ ನೀಡಿದ್ದ ಚೆಕ್ ಬ್ಯಾಂಕಿನಲ್ಲಿ ಅಮಾನ್ಯವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಇದಲ್ಲದೆ ಹಣಕ್ಕಾಗಿ ಮಾಲೀಕರು ಪದೆ ಪದೆ ಮನವಿ ಮಾಡಿದರೂ ಹಣ ಕೊಡದೆ ಸತಾಯಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಮೇಲೆ ಮೂವರ ವಿರುದ್ಧ ಎಫ್ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 