ಅಮೆರಿಕದಲ್ಲಿ ಸಿಲುಕಿದ ಮಾಜಿ ಹಾಕಿ ಆಟಗಾರ, ನೆರವಿಗೆ ಧಾವಿಸುವಂತೆ ಮನವಿ
ಕ್ಯಾಲಿಫೋರ್ನಿಯಾ, ಏ 9,ಪ್ರಸ್ತುತ ಅಮೆರಿಕದಲ್ಲಿ ಸಿಲುಕಿರುವ ಭಾರತದ ಮಾಜಿ ಹಾಕಿ ಆಟಗಾರ ಅಶೋಕ್ ದಿವಾನ್, ಇಡೀ ಜಗತ್ತನ್ನು ಸ್ತಬ್ಧಗೊಳಿಸಿರುವ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಮಧ್ಯೆ ತಮಗೆ ಸಹಾಯ ಮಾಡುವಂತೆ ಭಾರತೀಯ ಅಧಿಕಾರಿಗಳನ್ನು ಕೋರಿದ್ದಾರೆ.1976ರ ಬೇಸುಗೆ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ದಿವಾನ್, ಭಾರತೀಯ ಒಲಿಂಪಿಕ್ಸ್ ಅಧ್ಯಕ್ಷ ನಾರಿಂದರ್ ಬಾತ್ರಾ ಅವರಿಗೆ ಲಿಖಿತ ಪತ್ರ ಬರೆದಿದ್ದು, ತಮ್ಮ ನೆರವಿಗೆ ಧಾವಿಸುವಂತೆ ಯಾಚಿಸಿದ್ದಾರೆ.ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕ್ಯಾಲಿಫೋರ್ನಿಯಾದಲ್ಲಿ ಕಳೆದ ವಾರ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಹಾಜರಾಗಬೇಕಿತ್ತು, ಕೊರೊನಾದಿಂದಾಗಿ ಇದೀಗ ಇಲ್ಲಿ ಸಿಲುಕಿದ್ದೇನೆ, ಎಂದು 65 ವರ್ಷದ ದಿವಾನ್ ಪತ್ರದಲ್ಲಿ ತಿಳಿಸಿದ್ದಾರೆ.ಏ.20 ರಂದು ತಾವು ಭಾರತಕ್ಕೆ ಹಿಂತಿರುಗಬೇಕಿತ್ತು ಎಂದು ದಿವಾನ್ ಹೇಳಿದ್ದಾರೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ಅವರ ಪ್ರಯಾಣದ ದಿನಾಂಕ ಮುಂದೂಡಲಾಗಿದೆ. ಭಾರತ ಏಪ್ರಿಲ್ 14ರವರೆಗೆ ಲಾಕ್ ಡೌನ್ ಘೋಷಿಸಿದ್ದು, ಇದು ಮುಗಿಯವರೆಗೂ ಯಾವುದೇ ಕಾರಣಕ್ಕೂ ವಿಮಾನ ಹರಾಟಕ್ಕೆ ಅನುಮತಿ ನೀಡುವುದಿಲ್ಲ ಎಂದಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 