ಆನ್ ಲೈನ್ ಮದ್ಯ ಮಾರಾಟಕ್ಕೆ ಮಾಜಿ ಸಚಿವ ತಿಮ್ಮಾಪುರ ಒತ್ತಾಯ
ಬಾಗಲಕೋಟೆ, ಏ 12,ರಾಜ್ಯ ಸರ್ಕಾರ ಕೂಡ ಕೇರಳ ಮಾದರಿಯಲ್ಲಿ ಆನ್ ಲೈನ್ ಮೂಲಕ ಮದ್ಯ ಮಾರಾಟ ಆರಂಭಿಸಬೇಕು ಎಂದು ಮಾಜಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಒತ್ತಾಯಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕೊರೊನಾ ಹಾಗೂ ಲಾಕ್ ಡೌನ್ ನಿಂದ ಮದ್ಯ ಮಾರಾಟ ಬಂದ್ ಮಾಡಲಾಗಿದ್ದು ಪರಿಣಾಮ ಮದ್ಯ ಸಿಗದೆ 20 ಜನರು ಸತ್ತಿದ್ದಾರೆ ಎಂಬ ವರದಿಗಳು ಬಂದಿವೆ ಈ ಕಾರಣಕ್ಕಾಗಿ ಸರ್ಕಾರ ಆನ್ ಲೈನ್ ಮೂಕಲ ಮದ್ಯ ಮಾರಾಟ ಮಾಡಬೇಕು ಎಂದು ಅವರು ಹೇಳಿದರು. ರಾಜ್ಯ ಸರ್ಕಾರವು ಸದ್ಯ ಆನ್ ಲೈನ್ ನಲ್ಲಿ ಮದ್ಯ ಮಾರಾಟ ಆರಂಭಿಸಿದರೆ ಒಳ್ಳೆಯದು ಇದರಿಂದಾಗಿ ಸರ್ಕಾರಕ್ಕೂ ಆದಾಯ ಬರುತ್ತದೆ. ಕಳ್ಳಭಟ್ಟಿ ವ್ಯವಹಾರಗಳಿಗೂ ಕಡಿವಾಣ ಬೀಳಲಿದೆ ಎಂದು ಹೇಳಿದರು.ಸಾರಾಯಿ ಸಂಪೂರ್ಣವಾಗಿ ಬಂದ್ ಆಗಿದ್ದರೆ ಸಂತೋಷವಿತ್ತು. ಎಷ್ಟು ಜನ ಸಾಯುತ್ತಿದ್ದರು. ಆದರೆ ಈಗ ಸಾರಾಯಿ ಸಂಪೂರ್ಣ ಬಂದ್ ಆಗಿಲ್ಲ ನೂರು, ಸಾವಿರಕ್ಕೆ ಅಂದರೆ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುಲಾಗುತ್ತಿದೆ ದುಡ್ಡು ಇದ್ದವರಿಗೆ ಮದ್ಯ ಸಿಗುತ್ತದೆ. ತೀರಾ ಬಡವರಿಗೆ ಸಿಗುತ್ತಿಲ್ಲ ಇದರ ಬದಲಿಗೆ ಸರ್ಕಾರ ಆನ್ ಲೈನ್ ಮೂಲಕ ಮದ್ಯ ಮಾರಾಡ ಮಾಡಿದರೆ ಇಂತಹ ಅನೇಕ ಲೋಪದೋಷಗಳನ್ನು ತಡೆಯಬಹುದು ಎಂದು ಅವರು ಸಲಹೆ ಮಾಡಿದ್ದಾರೆ .
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 