ಆನ್ ಲೈನ್ ಮದ್ಯ ಮಾರಾಟಕ್ಕೆ ಮಾಜಿ ಸಚಿವ ತಿಮ್ಮಾಪುರ ಒತ್ತಾಯ
ಬಾಗಲಕೋಟೆ, ಏ 12,ರಾಜ್ಯ ಸರ್ಕಾರ ಕೂಡ ಕೇರಳ ಮಾದರಿಯಲ್ಲಿ ಆನ್ ಲೈನ್ ಮೂಲಕ ಮದ್ಯ ಮಾರಾಟ ಆರಂಭಿಸಬೇಕು ಎಂದು ಮಾಜಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಒತ್ತಾಯಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕೊರೊನಾ ಹಾಗೂ ಲಾಕ್ ಡೌನ್ ನಿಂದ ಮದ್ಯ ಮಾರಾಟ ಬಂದ್ ಮಾಡಲಾಗಿದ್ದು ಪರಿಣಾಮ ಮದ್ಯ ಸಿಗದೆ 20 ಜನರು ಸತ್ತಿದ್ದಾರೆ ಎಂಬ ವರದಿಗಳು ಬಂದಿವೆ ಈ ಕಾರಣಕ್ಕಾಗಿ ಸರ್ಕಾರ ಆನ್ ಲೈನ್ ಮೂಕಲ ಮದ್ಯ ಮಾರಾಟ ಮಾಡಬೇಕು ಎಂದು ಅವರು ಹೇಳಿದರು. ರಾಜ್ಯ ಸರ್ಕಾರವು ಸದ್ಯ ಆನ್ ಲೈನ್ ನಲ್ಲಿ ಮದ್ಯ ಮಾರಾಟ ಆರಂಭಿಸಿದರೆ ಒಳ್ಳೆಯದು ಇದರಿಂದಾಗಿ ಸರ್ಕಾರಕ್ಕೂ ಆದಾಯ ಬರುತ್ತದೆ. ಕಳ್ಳಭಟ್ಟಿ ವ್ಯವಹಾರಗಳಿಗೂ ಕಡಿವಾಣ ಬೀಳಲಿದೆ ಎಂದು ಹೇಳಿದರು.ಸಾರಾಯಿ ಸಂಪೂರ್ಣವಾಗಿ ಬಂದ್ ಆಗಿದ್ದರೆ ಸಂತೋಷವಿತ್ತು. ಎಷ್ಟು ಜನ ಸಾಯುತ್ತಿದ್ದರು. ಆದರೆ ಈಗ ಸಾರಾಯಿ ಸಂಪೂರ್ಣ ಬಂದ್ ಆಗಿಲ್ಲ ನೂರು, ಸಾವಿರಕ್ಕೆ ಅಂದರೆ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುಲಾಗುತ್ತಿದೆ ದುಡ್ಡು ಇದ್ದವರಿಗೆ ಮದ್ಯ ಸಿಗುತ್ತದೆ. ತೀರಾ ಬಡವರಿಗೆ ಸಿಗುತ್ತಿಲ್ಲ ಇದರ ಬದಲಿಗೆ ಸರ್ಕಾರ ಆನ್ ಲೈನ್ ಮೂಲಕ ಮದ್ಯ ಮಾರಾಡ ಮಾಡಿದರೆ ಇಂತಹ ಅನೇಕ ಲೋಪದೋಷಗಳನ್ನು ತಡೆಯಬಹುದು ಎಂದು ಅವರು ಸಲಹೆ ಮಾಡಿದ್ದಾರೆ .
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 