ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ
ಬೆಂಗಳೂರು 08: ಮಾಜಿ ಸಚಿವ, ಚಳ್ಳಕೆರೆ ಕ್ಷೇತ್ರದ ಮೂರು ಬಾರಿಯ ಶಾಸಕ, ವಾಲ್ಮೀಕಿ ಸಮುದಾಯದ ನಾಯಕ ತಿಪ್ಪೇಸ್ವಾಮಿ ಅವರು ಬುಧವಾರ ಬೆಳಗ್ಗೆ ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ತವರು ಗ್ರಾಮ ಚಿತ್ರದುರ್ಗದ ಚಳ್ಳಕೆರೆ ಗ್ರಾಮದ ಕಾಳಪ್ಪನ ಹಟ್ಟಿಯಲ್ಲಿ ಅಂತಿಮ ದರ್ಶನದ ಬಳಿಕ ಅಂತ್ಯ ಸಂಸ್ಕಾರ ನಡೆಯಲಿದೆ.
ಜೆಡಿಎಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಎಚ್.ಡಿ.ದೇವೇಗೌಡ ಅವರ ಸಂಪುಟದಲ್ಲಿ ಅಬಕಾರಿ ಖಾತೆ, ಜೆ.ಎಚ್.ಪಟೇಲ್ ಅವರ ಸಂಪುಟದಲ್ಲಿ ಸಣ್ಣ ನೀರಾವರಿ ಸಚಿವರಾಗಿದ್ದರು. ಜೆಡಿಎಸ್ ತೊರೆದಿದ್ದ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 