ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಬಳಿಗೇರ ಆಯ್ಕೆ
ಲೋಕದರ್ಶನ ವರದಿ
ಶಿರಹಟ್ಟಿ: ಪಟ್ಟಣದ ಉತ್ತಮ ಸಾಹಿತಿ ಹಾಗೂ ಶಿಕ್ಷಕ ಕೆ.ಎ. ಬಳಿಗೇರ ಅವರನ್ನು ಕನ್ನಡ ಜಾನಪದ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಇತ್ತೀಚೆಗೆ ಅವರನ್ನು ಗದಗ ವಿಡಿಎಸ್ಟಿ ಸಭಾಂಗಣದ ಪದಗ್ರಹಣ ಸಮಾರಂಭದಲ್ಲಿ ಜರುಗಿದ ಗದಗ ಜಿಲ್ಲಾ ಕನ್ನಡ ಜಾನಪದ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಾಂತಕುಮಾರ ಭಜಂತ್ರಿ ಮತ್ತು ರಾಜ್ಯಾಧ್ಯಕ್ಷ ಬಾಲಾಜಿಯವರ ಸಮ್ಮುಖದಲ್ಲಿ ಕೆ.ಎ ಬಳಿಗೇರ ಅವರನ್ನು ಕನ್ನಡ ಜಾನಪದ ಪರಿಷತ್ತಿನ ತಾಲೂಕ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಯಿತು.
ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಕೆ.ಎ.ಬಳಿಗೇರ ನಾನು ಕನ್ನಡ ಜಾನಪದ ಪರಿಷತ್ತಿನ ತಾಲೂಕ ಅಧ್ಯಕ್ಷನಾಗಿ ನನ್ನನ್ನು ಆಯ್ಕೆ ಮಾಡಿರುವುದು ತುಂಬಾ ಖುಷಿಯನ್ನು ತಂದಿದ್ದು, ನಾನು ಮುಂದಿನ ಸಾಹಿತ್ಯ ಪರಿಷತ್ತಿನ ತಾಲೂಕಾ ಅಧ್ಯಕ್ಷನಾಗಿ ಪ್ರಾಮಾಣಿಕ ಸೇವೆಯನ್ನು ತನು, ಮನ, ಧನದಿಂದ ಕೆಲಸ ಮಾಡಿ ಕ.ಜಾ.ಸಾ.ಪರಿಷತ್ತಿನ ಕಾರ್ಯ ನಿರ್ವಹಿಸುತ್ತೇನೆ ಹಾಗೂ ಈಗಾಗಲೇ ಕ.ಸಾ.ಪಾ ಅಧ್ಯಕ್ಷ ಎಂ.ಕೆ ಲಮಾಣಿ ಹಾಗೂ ಶ.ಸಾ.ಪ. ಅಧ್ಯಕ್ಷ ಎಫ್. ಎಸ್ ಅಕ್ಕಿ ಮತ್ತು ವ.ಸಾ.ಪ ಅಧ್ಯಕ್ಷ ಎಚ್ ಎಂ ದೇವಗಿರಿ ಅವರಿಗೆ ಅಭಿನಂದನೆಗಳನ್ನು ಅಪರ್ಿಸುತ್ತೇನೆ ಎಂದು ಪ್ರತಿಕ್ರಿಯಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 