ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೇರಣೆ ಪ್ರತಿಭಾ ಕಾರಂಜಿ : ಶ್ರೀಕಾಂತ
Fountain of Talent is an inspiration for students' talent: Srikanth
ಶಿಗ್ಗಾವಿ 13: ಮಕ್ಕಳ್ಳಲ್ಲಿರುವ ಪ್ರತಿಭೆಯನ್ನು ಪಾಲಕರು, ಶಿಕ್ಷಕರು, ಶಿಕ್ಷಣ ಪ್ರೇಮಿಗಳು ಗುರುತಿಸಿ ಪ್ರೋತ್ಸಾಹಿಸಬೇಕೆಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ತಾಲೂಕಿನ ಕಬನೂರ ಗ್ರಾಮದಲ್ಲಿ ಬನ್ನೂರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿ ಜೀವನದಲ್ಲಿ ಹೊಸ ಹೊಸ ಅನ್ವೇಷಣೆ ಕೌಶಲ್ಯ ಕ್ರಿಯಾತ್ಮಕ ಚಟುವಟಿಕೆ ಬೆಳೆಸಿಕೊಂಡಾಗ ಮಾತ್ರ ವ್ಯಕ್ತಿತ್ವ ವಿಕಸನ ಸಾಧ್ಯ ಜೊತೆಗೆ ಪರಿಪೂರ್ಣ ವ್ಯಕ್ತಿಯಾಗಲು ಸಾಧ್ಯ ಈ ದಿಸೆಯಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಿ ಸಾಧಕರಾಗಬೇಕು ಎಂದು ಹೇಳಿದರು. ಎಸ್ ಡಿ ಎಂ ಸಿ ಅಧ್ಯಕ್ಷ ಈರ್ಪ ಚಿಂಚಲಿ ಅಧ್ಯಕ್ಷತೆವಹಿಸಿದ್ದರುಈ ಸಂದರ್ಭದಲ್ಲಿ ಬಿ. ಶ್ರೀನಿವಾಸ ಊರಿನ ಪ್ರಮುಖರಾದ ಬಸವರಾಜ ಜಕ್ಕಣ್ಣವರ, ಶಿವಪ್ಪ ಜಕ್ಕಣ್ಣವರ, ಗದಿಗೆಪ್ಪ ಗುಂಡಣ್ಣವರ, ಸೋಮಪ್ಪ ಕಾಳಿ ,ನಾಗಪ್ಪ ಚಿಂಚಲಿ, ಚನ್ನಬಸಪ್ಪ ಗುಂಡಣ್ಣವರ, ಗಂಗಾಧರ ಗುಂಡಣ್ಣವರ, ಉಪನ್ಯಾಸಕ ಧರ್ಮರಾಜ ಬಿಂದಲಗಿ, ಅಶೋಕ್ ಓಲೇಕಾರ್, ಶಿವಾನಂದ ಕಮಡೊಳ್ಳಿ, ಬಸವರಾಜ್ ಲಂಗೋಟಿ ಅಧಿಕಾರಿಗಳು, ಶಿಕ್ಷಕರು,ಬಿ. ಆರ್. ಪಿ.ಹಾಗೂ ಸಿ. ಆರ್. ಪಿ ವಿದ್ಯಾರ್ಥಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 