ನಾಲ್ಕು ಕಂಟ್ರಿಮೇಡ್ ಪಿಸ್ತೂಲ್ ಪತ್ತೆ: ಚುರುಕುಗೊಂಡ ತನಿಖೆ
ಬೆಳಗಾವಿ, ಫೆ.12, ಕಸದ ರಾಶಿಯಲ್ಲಿ ನಾಲ್ಕು ಕಂಟ್ರಿಮೇಡ್ ಪಿಸ್ತೂಲ್ ಗಳು ಪತ್ತೆಯಾಗಿದ್ದು, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೂ ಸಂಬಂಧವಿದೇಯಾ ? ಎಂಬುದರ ಕುರಿತುಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಬೆಳಗಾವಿ ತಾಲೂಕಿನ ವಾಘವಾಡೆ ಗ್ರಾಮದಲ್ಲಿ ಸ್ಥಳೀಯರು ಸ್ಥಳ ಸ್ವಚ್ಛಗೊಳಿಸುವ ವೇಳೆಯಲ್ಲಿ ನಾಲ್ಕು ಕಂಟ್ರಿಮೇಡ್ ಪಿಸ್ತೂಲ್ ಪತ್ತೆಯಾಗಿವೆ.ಮಣ್ಣಿನಲ್ಲಿ ಹೂತಿಟ್ಟದ್ದರಿಂದ ಪಿಸ್ತೂಲ್ ಗಳು ತುಕ್ಕು ಹಿಡಿದಿವೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಪಿಸ್ತೂಲ್ ಚಲಾಯಿಸುವ ತರಬೇತಿ ಖಾನಾಪುರ ತಾಲೂಕಿನ ಅರಣ್ಯ ಪ್ರದೇಶದಲ್ಲಿ ನೀಡಲಾಗಿತ್ತು ಎಂದು ಎಸ್ ಐಟಿ ತನಿಖೆ ವೇಳೆ ಬೆಳಕಿಗೆ ಬಂದಿತ್ತು. ಈಗ ಕಂಟ್ರಿಮೇಡ್ ಪಿಸ್ತೂಲ್ ಪತ್ತೆಯಾಗಿದ್ದರಿಂದ ಹಲವು ಅನುಮಾನ ಮೂಡಿಸಿದೆ.ಕಂಟ್ರಿಮೇಡ್ ಪಿಸ್ತೂಲ್ ಪತ್ತೆಯಾದ ಹಿನ್ನೆಲೆಯಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 