ನಾಲ್ಕು ಕಂಟ್ರಿಮೇಡ್ ಪಿಸ್ತೂಲ್ ಪತ್ತೆ: ಚುರುಕುಗೊಂಡ ತನಿಖೆ
ಬೆಳಗಾವಿ, ಫೆ.12, ಕಸದ ರಾಶಿಯಲ್ಲಿ ನಾಲ್ಕು ಕಂಟ್ರಿಮೇಡ್ ಪಿಸ್ತೂಲ್ ಗಳು ಪತ್ತೆಯಾಗಿದ್ದು, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೂ ಸಂಬಂಧವಿದೇಯಾ ? ಎಂಬುದರ ಕುರಿತುಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಬೆಳಗಾವಿ ತಾಲೂಕಿನ ವಾಘವಾಡೆ ಗ್ರಾಮದಲ್ಲಿ ಸ್ಥಳೀಯರು ಸ್ಥಳ ಸ್ವಚ್ಛಗೊಳಿಸುವ ವೇಳೆಯಲ್ಲಿ ನಾಲ್ಕು ಕಂಟ್ರಿಮೇಡ್ ಪಿಸ್ತೂಲ್ ಪತ್ತೆಯಾಗಿವೆ.ಮಣ್ಣಿನಲ್ಲಿ ಹೂತಿಟ್ಟದ್ದರಿಂದ ಪಿಸ್ತೂಲ್ ಗಳು ತುಕ್ಕು ಹಿಡಿದಿವೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಪಿಸ್ತೂಲ್ ಚಲಾಯಿಸುವ ತರಬೇತಿ ಖಾನಾಪುರ ತಾಲೂಕಿನ ಅರಣ್ಯ ಪ್ರದೇಶದಲ್ಲಿ ನೀಡಲಾಗಿತ್ತು ಎಂದು ಎಸ್ ಐಟಿ ತನಿಖೆ ವೇಳೆ ಬೆಳಕಿಗೆ ಬಂದಿತ್ತು. ಈಗ ಕಂಟ್ರಿಮೇಡ್ ಪಿಸ್ತೂಲ್ ಪತ್ತೆಯಾಗಿದ್ದರಿಂದ ಹಲವು ಅನುಮಾನ ಮೂಡಿಸಿದೆ.ಕಂಟ್ರಿಮೇಡ್ ಪಿಸ್ತೂಲ್ ಪತ್ತೆಯಾದ ಹಿನ್ನೆಲೆಯಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 