ರಾಜಾಸೀಟು ಉದ್ಯಾನವನದಲ್ಲಿ ನಾಲ್ಕು ದಿನಗಳ ಫಲಪುಷ್ಪ ಪ್ರದರ್ಶನ: ಜಿಲ್ಲಾಧಿಕಾರಿ
ಮಡಿಕೇರಿ, ಫೆ.6 : ಪ್ರವಾಸಿಗರ ಸ್ವರ್ಗವೆಂದೇ ಹೆಸರಾದ ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಶುಕ್ರವಾರದಿಂದ ಫೆಬ್ರವರಿ 10ರ ವರೆಗೆ ವಾಷಿ೯ಕ ಫಲಪುಷ್ಪ ಪ್ರದರ್ಶನ ಆಯೋಜಿತವಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ತಿಳಿಸಿದ್ದಾರೆ.
ಫಲಪುಪ್ಪ ಪ್ರದಶ೯ನಕ್ಕಾಗಿ ಈಗಾಗಲೇ ರಾಜಾಸೀಟ್ ಉದ್ಯಾನದಲ್ಲಿ ವಿವಿಧ ಬಗೆಯ ಹೂವುಗಳನ್ನು ನೂರಾರು ಹೂಕುಂಡಗಳಲ್ಲಿ ಇರಿಸಲಾಗಿದ್ದು. ಸಾವಿರಾರು ಸಂಖ್ಯೆಯಲ್ಲಿ ವೀಕ್ಷಕರು ಆಗಮಿಸುವ ನಿರೀಕ್ಷೆಯಿದೆ. ಬಣ್ಣ ಬಣ್ಣದ ಹೂವಿನಿಂದ ಅಲಂಕೃತವಾಗುವ ವಿವಿಧ ಪ್ರಾಣಿ ಪಕ್ಷಿಗಳ ಕಲಾಕೃತಿಗಳು ಕೂಡ ಫಲಪುಷ್ಪ ಪ್ರದರ್ಶನದಲ್ಲಿ ಗಮನ ಸೆಳೆಯಲಿದೆ. ಕೊಡಗಿನ ಸಂಸ್ಕೃತಿ, ಸ್ಥಳೀಯ ಪರಂಪರೆ ಮತ್ತು ಸಂಪ್ರದಾಯಗಳಿಗೆ ಸಂಬಂಧಿಸಿದಂತೆ ಪ್ರವಾಸಿಗರಿಗೆ ಮಾಹಿತಿಗಳು ದೊರಕಲಿದೆ ಎಂದು ಅವರು ತಿಳಿಸಿದ್ದಾರೆ.
ಈ ವರ್ಷದ ಮುಖ್ಯ ಆಕರ್ಷಣೆಯಾಗಿ ಕೊಡಗಿನ ಸಾಂಪ್ರದಾಯಿಕ ಆನ್ ಮನೆಯನ್ನು ವಿವಿಧ ಹೂವುಗಳಿಂದ ರೂಪಿಸಲಾಗಿದೆ. ಕಲಾಕೃತಿಗಳ ಜೊತೆಯಲ್ಲಿ ಜನರು ಫೋಟೋ ತೆಗೆದುಕೊಳ್ಳುವಂತೆ ಸೆಲ್ಪಿ ಫೋಟೋ ಪ್ರೇಮ್ ಅನ್ನು ನಿಮಿ೯ಸಲಾಗುತ್ತಿದೆ. ಪ್ರದರ್ಶನಕ್ಕೆ ಒಟ್ಟಾರೆ ಸುಮಾರು 20 ಲಕ್ಷ ರೂ. ವೆಚ್ಚವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ 