25 ಲಕ್ಷ ರೂ. ವಂಚಿಸಿ ಪರಾರಿಯಾದ ಮಹಿಳೆ.. ಸಂಘದಲ್ಲಿ ಮಹಿಳೆಯರ ಹೆಸರಿನಿಂದ ಹಣ ಪಡೆದು ವಂಚನೆ..
Fraud by taking money in the name of women in the association..
ಕಾಗವಾಡ 27: ಪಟ್ಟಣದಲ್ಲಿ ಮಹಿಳೆಯೋರ್ವಳು ಮಹಿಳಾ ಸ್ವ-ಸಹಾಯ ಸಂಘದ ಸದಸ್ಯೆಯರನ್ನು ವಂಚಿಸಿ, ಸುಮಾರು 25 ಲಕ್ಷ ರೂ. ವಂಚಿಸಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪಟ್ಟಣದ ಮಿನಾಕ್ಷಿ ತೇಲಿ ಕಳೆದ ಹತ್ತು ವರ್ಷಗಳಿಂದ ಮಹಿಳೆಯರಿಗೆ ಸ್ವ-ಸಹಾಯ ಸಂಘಗಳ ಮುಖಾಂತರ ಸಾಲ ಕೊಡಿಸುವ ಏಜೆಂಟಳಾಗಿ ಕಾರ್ಯನಿರ್ವಹಿಸುತ್ತಾ ಮಹಿಳೆಯರ ವಿಶ್ವಾಸ ಗಳಿಸಿ, ಈಗ ತನ್ನ ಮಗನಿಗೆ ನೌಕರಿಗಾಗಿ ಹಣ ಹೊಂದಿಸಬೇಕೆಂದು ನಂಬಿಸಿ, ಅನೇಕ ಮಹಿಳೆಯರ ಹೆಸರಿನಲ್ಲಿ ಸುಮಾರು 25 ಸಾಲ ರೂ.ಗಳ ಸಾಲ ಪಡೆದುಕೊಂಡು ಪರಾರಿಯಾಗಿದ್ದಾಳೆ.
ಹಣ ಕಳೆದುಕೊಂಡ ಮಹಿಳೆಯರು, ಈ ಕುರಿತು ಪಟ್ಟಣದ ಪ್ರಮುಖರಿಗೆ ಮತ್ತು ಕಾಗವಾಡ ಪೋಲಿಸರಿಗೆ ಲಿಖಿತ ರೂಪದಲ್ಲಿ ದೂರು ಸಲ್ಲಿಸಿ ನ್ಯಾಯ ಒದಗಿಸಿಕೊಡಬೇಕೆಂದು ಕೇಳಿಕೊಂಡರೂ ಯಾವದೇ ಪ್ರಯೋಜನವಾಗಿಲ್ಲ.
ಈಗ ನೊಂದ ಮಹಿಳೆಯರು ಮಾಧ್ಯಮದವರೊಂದಿಗೆ ಮಾತನಾಡಿ, ಹಣ ಕಳೆದುಕೊಂಡ ಬಗ್ಗೆ ವಿವರಣೆ ನೀಡಿದ್ದು, ತಮಗೆ ನ್ಯಾಯ ಕೊಡಿಸಬೇಕೆಂದು ಅವಲತ್ತುಕೊಂಡಿದ್ದಾರೆ.
ಈ ಮಧ್ಯೆ ಹಣದೊಂದಿಗೆ ಪರಾರಿಯಾಗಿರುವ ಮಹಿಳೆಯು ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಆಕೆಯ ಮಗನನ್ನು ಸಂಪರ್ಕಿಸಿದಾಗ ನಮ್ಮ ತಾಯಿ ನನ್ನ ನೌಕರಿಗಾಗಿ ಹಣ ನೀಡಿದ್ದು ನಿಜ. ಆದರೆ ಕೇವಲ ನಾಲ್ಕು ಮಹಿಳೆಯರ ಸಂಘದ ಹಣ ಮಾತ್ರ ನೀಡಿರುತ್ತಾಳೆ. ಬಾಕಿ ಮಹಿಳೆಯರು ನೀಡಿದ ಹಣದ ವಿಷಯ ನನಗೆ ಗೊತ್ತಿಲ್ಲ ಎಂದು ಜಾರಿಕೊಳ್ಳುತ್ತಿದ್ದಾನೆ.
ಈ ಪ್ರಕರಣದಲ್ಲಿ ಸುಮಾರು ಹದಿನೈದು ಮಹಿಳೆಯರು ತಮ್ಮ ಹೆಸರಿನಲ್ಲಿ ಐವತ್ತರಿಂದ ಒಂದೂವರೆ ಲಕ್ಷದವರೆಗೆ ಸಾಲ ತೆಗೆಸಿ, ವಂಚಕಿ ಮಹಿಳೆಯರಿಗೆ ನೀಡಿರುವದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತದೆ.
ಸಂಭಂಧಪಟ್ಟ ಅಧಿಕಾರಿಗಳು, ಪೋಲಿಸ್ರು ವಂಚಕ ಮಹಿಳೆಯನ್ನು ಹಿಡಿದು, ನೊಂದ ಮಹಿಳೆಯರಿಗೆ ನ್ಯಾಯ ಕೊಡುವರೇ ಕಾಯ್ದು ನೋಡಬೇಕಿದೆ.
ಜೊತೆಗೆ ಕಳೆದ ಕೆಲ ದಶಕಗಳಿಂದ ಗ್ರಾಮೀಣ ಭಾಗದಲ್ಲಿ ಮಹಿಳಾ ಸ್ವ-ಸಹಾಯ ಸಂಘದ ಹೆಸರಿನಲ್ಲಿ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರ ಸ್ವ-ಸಹಾಯ ಸಂಘಳಿಗೆ ಕಟ್ಟುನಿಟ್ಟಿನ ಕಾನೂನು ರೂಪಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 