ಸೆ. 02ರಂದು ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

ಸೆ. 02ರಂದು ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ  Free Eye Check-up and Surgery Camp on Sept. 02

ಸವಣೂರ 31:ತಾಲೂಕಿನ ತೊಂಡೂರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ಸಮುದಾಯ ಭವನದಲ್ಲಿ ಶ್ರೀ ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್‌, ಶಂಕರ ಕಣ್ಣಿನ ಆಸ್ಪತ್ರೆ, ಶಿವಮೊಗ್ಗ.ಶಂಕರ ದೃಷ್ಠಿ ಕೇಂದ್ರ ಹಾನಗಲ್, ಶ್ರೀ ಸಿದ್ದಲಿಂಗೇಶ್ವರ ಕಲ್ಮಠ ತೊಂಡೂರ,ಶೂನ್ಯ ಪೌಂಡೇಶನ್,ಹಾವೇರಿ,ಗ್ರಾಮ ಪಂಚಾಯತಿ ತೊಂಡೂರ, ಅಮ್ಮಾ ಸಂಸ್ಥೆ(ರಿ) ಹಿರೇಮುಗದೂರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಹಾವೇರಿ.ಜಿಲ್ಲಾ ಅಂಧತ್ವ ನಿಯಂತ್ರಣಾ ಕಾರ್ಯಕ್ರಮ,ತಾಲೂಕು ವೈಧ್ಯಾಧಿಕಾರಿಗಳ ಕಛೇರಿ,ಸವಣೂರ ಇವರ ಸಂಯುಕ್ತಾಶ್ರಯದಲ್ಲಿ ಸಪ್ಟಂಬರ್‌-02 ರಂದು ಮಂಗಳವಾರ ಬೆಳಿಗ್ಗೆ 9 ರಿಂದ 1 ಘಂಟೆಯವರಿಗೆ ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.

ತೊಂಡೂರ,ಹುರಳಿಕುಪ್ಪಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಬೇಕೆಂದು ತೊಂಡೂರದ ಶ್ರೀ ಸಿದ್ದಲಿಂಗೇಶ್ವರ ಕಲ್ಮಠದ ಶ್ರೀಗಳಾದ ಶ್ರೀ ಬಸವಶಾಂತಲಿಂಗ ಸ್ವಾಮಿಗಳು,ಗ್ರಾಪಂ ಜನಪ್ರತಿನಿಧಿಗಳು ಹಾಗೂ ಅಮ್ಮಾ ಸಂಸ್ಥೆ(ರಿ) ಸಂಸ್ಥಾಪಕರಾದ ನಿಂಗ್ಪಪ ಎಂ ಆರೇರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.