ಉಚಿತ ಬೆನ್ನುಮೂಳೆ ತಪಾಸಣಾ ಶಿಬಿರ
Free Spinal Cord Check-up Camp
ಲೋಕದರ್ಶನ ವರದಿ
ವಿಜಯನಗರ (ಹೊಸಪೇಟೆ), ಆ.5: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, 60 ಹಾಸಿಗೆಗಳ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಭಗವಾನ್ ಮಹಾವೀರ ಜೈನ್ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಬೆನ್ನುಮೂಳೆ ತಪಾಸಣಾ ಶಿಬಿರ ನಡೆಯಿತು.
ಶಿಬಿರದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು, ಸ್ಕೋಲಿಯೊಸಿಸ್ (ಖಛಿಠ) ಕುರಿತು ಜಾಗೃತಿ ಮೂಡಿಸುವುದು ಹಾಗೂ ಆರಂಭಿಕ ಹಂತದಲ್ಲೇ ತಪಾಸಣೆ ನಡೆಸುವುದು ಶಿಬಿರದ ಉದ್ದೇಶ ಎಂದು ತಿಳಿಸಿದರು.
ಒಟ್ಟು 9 ಮಕ್ಕಳನ್ನು ತಪಾಸಣೆ ಮಾಡಲಾಗಿದ್ದು, 4 ಮಕ್ಕಳಿಗೆ ಮುಂದಿನ ಚಿಕಿತ್ಸೆಗಾಗಿ ಸೂಚನೆ ನೀಡಲಾಗಿದೆ. 7 ಪ್ರಕರಣಗಳನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಗಿದ್ದು, ಇಬ್ಬರನ್ನು ಎಕ್ಸ್ರೇ ಪರೀಕ್ಷೆಗೆ ಒಳಪಡಿಸಲಾಗಿದೆ.
ಜಿಲ್ಲಾ ಆರಿ್ಸಎಚ್ ಅಧಿಕಾರಿ ಡಾ. ಜಂಬಯ್ಯ ಮಾತನಾಡಿ, ದುಬಾರಿ ವೆಚ್ಚದ ಬೆನ್ನುಮೂಳೆ ಶಸ್ತ್ರಚಿಕಿತ್ಸೆಯನ್ನು ಭಗವಾನ್ ಮಹಾವೀರ ಜೈನ್ ಆಸ್ಪತ್ರೆ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಉಚಿತವಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ರಾಧಿಕಾ, ಡಾ. ನೂರ್ ಪಾಷಾ, ಡಾ. ಅಲೋಕ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 