140 ಮಕ್ಕಳಿಗೆ ಉಚಿತ ಸುನ್ನಿತ ಕಾರ್ಯಕ್ರಮ
Free Sunnt program for 140 children
ಹೊಸಪೇಟೆ 04: ಇಂದು ಹೊಸಪೇಟೆ ಸ್ಥಳೀಯ ಅಂಜುಮನ್ ಖಿದ್ಮತೆ ಇಸ್ಲಾಮ್ ಕಮಿಟಿ ವತಿಯಿಂದ ನಗರದ ಅಂಜುಮನ್ ಆಸ್ಪತ್ರೆಯ ಅವರಣದಲ್ಲಿ ನಗರದ ಹಾಗೂ ಗ್ರಾಮೀಣ ಭಾಗದ ಮುಸ್ಲಿಂ ಭಾಂದವರ 140 ಮಕ್ಕಳಿಗೆ ಉಚಿತ ಸುನ್ನಿತ( ಖತ್ನಾ) ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಇದೇ ವೇಳೆ ಸುನ್ನಿತಿಗೆ ಒಳಗಾದ ಎಲ್ಲಾ ಮಕ್ಕಳಿಗೂ ಜೌಷಧ ಹಾಗೂ ಪೌಷ್ಟಿಕಾಹಾರದ ಕಿಟ್ ನ್ನು ವಿತರಿಸಲಾಯಿತು.
ಈ ಕಾರ್ಯಕ್ರಮವನ್ನು ಕಮಿಟಿಯ ಅಧ್ಯಕ್ಷರಾದ ಹೆಚ್.ಎನ್.ಮೊಹಮ್ಮದ್ ಇಮಾಮ್ ನಿಯಾಜಿ, ಉದ್ದೇಶಿಸಿ ಮಾತನಾಡಿ, ಇಸ್ಲಾಂ ಧರ್ಮದ ಪ್ರಕಾರ ಪ್ರತಿಯೊಬ್ಬ ಮುಸ್ಲಿಂ ವ್ಯಕ್ತಿಯು ಸುನ್ನತೇ ಇಬ್ರಾಹಿಂ (ಖತ್ನಾ) ಮಾಡಿಸಿಕೊಳ್ಳುವುದು ಕಡ್ಡಾಯ ಆಚರಣೆಯಾಗಿದೆ ಈ ಆಚರಣೆಯು ಆರ್ಥಿಕವಾಗಿ ಹಿಂದುಳಿದ ಬಡ ಮುಸ್ಲಿಂ ಕುಟುಂಬಗಳಿಗೆ ಬಹಳ ಕಷ್ಟ ಸಾಧ್ಯವಾಗಿರುತ್ತದೆ, ಇಂತಹವರಿಗೆ ನೆರವಾಗಲು ಉಚಿತವಾದ ಸುನ್ನತೆ ಇಬ್ರಾಹಿಂ (ಖತ್ನಾ) ಕಾರ್ಯಕ್ರಮವನ್ನು ಕಮಿಟಿಯು ಹಮ್ಮಿಕೊಂಡು ಬರುತ್ತಿದ್ದು, ಈ ವರ್ಷ ದೇವರ ಕೃಪೆಯಿಂದ ಸುಮಾರು 140 ಕ್ಕೂ ಅಧಿಕ ಮಕ್ಕಳಿಗೆ ಉಚಿತ ಸುನ್ನತೆ ಇಬ್ರಾಹಿಂ (ಖತ್ನಾ) ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಅದು ಯಶಸ್ವಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಡಾಕ್ಟರ್ ಹಬೀಬುಲ್ಲ ಮತ್ತು ಡಾಕ್ಟರ್ ಕಲೀಮುಲ್ಲಾ, ರವರು, ಅಂಜುಮನ್ ಕಮಿಟಿಯ ಉಪಾಧ್ಯಕ್ಷರಾದ ಫೈರೋಜ್ ಖಾನ್, ಕಾರ್ಯದರ್ಶಿಗಳಾದ ಮೊಹಮ್ಮದ್ ಅಬೂಬ್ ಕರ್ ಅಶ್ರಫಿ, ಸಹಕಾರ್ಯದರ್ಶಿಗಳಾದ ಮೊಹಮ್ಮದ್ ದರ್ವೇಶ್, ಹಾಗು ಸದ್ಯಸರುಗಳಾದ ಸದ್ದಾಂ ಹುಸೇನ್ ಹಾಗೂ ನೂರಾರು ಪಾಲಕರು ಪೋಷಕರು ಸಮುದಾಯದ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 