ಯರಗಟ್ಟಿ, 14 : ಪಟ್ಟಣ ಬೀರದೇವರ ದೇವಸ್ಥಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾ ಅಧ್ಯಕ್ಷ ನಾರಾಯಣಗೌಡ ಅವರ ಹುಟ್ಟು ಹಬ್ಬದ ನಿಮಿತ್ಯ ರವಿವಾರ ಬೆಳಿಗ್ಗೆ 10-00 ಗಂಟೆಯಿಂದ ಮಧ್ಯಾಹ್ನ 04ರವರೆಗೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ನದಾಫ ಹೈಟೆಕ್ ಕಣ್ಣಿನ ಆಸ್ಪತ್ರೆ ಇವರ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಕಣ್ಣಿನ ಶಸ್ತ್ರಚಿಕೆತ್ಸೆ ಹಮ್ಮಿಕೊಳ್ಳಲಾಗಿದೆ ಯರಗಟ್ಟಿ ತಾಲೂಕನ ಎಲ್ಲಾ ಗ್ರಾಮಗಳ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ರಕವೇ ತಾಲೂಕಾ ಅಧ್ಯಕ್ಷ ಡಿ. ಕೆ. ರಫೀಕ ಪ್ರಕಟಣೆ ಮೂಲಕ ತಿಳಿಸಿದ್ದಾರೆ