ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ
Free eye checkup and surgery camp- Savanur
ಸವಣೂರ 27: ತಾಲೂಕಿನ ಹತ್ತಿಮತ್ತೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾರ್ಚ್-01 ಶನಿವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆಯವರಿಗೆ ಆಯೋಜಿಸಿದ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತಾಗಲಿ ಎಂದು ಅಮ್ಮಾ ಸಂಸ್ಥೆ(ರಿ) ಸಂಸ್ಥಾಪಕರಾದ ನಿಂಗಪ್ಪ ಎಂ ಆರೇರ ಹೇಳಿದರು.
ಹತ್ತಿಮತ್ತೂರಿನ ಸಂತೆ,ಅಂಗಡಿ ಹಾಗೂ ಸಾರ್ವಜನಿಕರಿಗೆ ಉಚಿತ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರದ ಕರಪತ್ರಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.
ಮಾರ್ಚ,01 ರಂದು ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್, ಶಂಕರ ಕಣ್ಣಿನ ಆಸ್ಪತ್ರೆ,ಶಿವಮೊಗ್ಗ.ಪ್ರಾಥಮಿಕ ಆರೋಗ್ಯ ಕೇಂದ್ರ,ಹತ್ತಿಮತ್ತೂರ ,ಅಮ್ಮಾ ಸಂಸ್ಥೆ(ರಿ) ಹಿರೇಮುಗದೂರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಹಾವೇರಿ. ಜಿಲ್ಲಾ ಅಂಧತ್ವ ನಿಯಂತ್ರಣಾ ಕಾರ್ಯಕ್ರಮ,ತಾಲೂಕು ವೈಧ್ಯಾಧಿಕಾರಿಗಳ ಕಛೇರಿ,ಸವಣೂರ,ಗ್ರಾಮ ಪಂಚಾಯತಿ ಹತ್ತಿಮತ್ತೂರ ಹಾಗೂ ಆಶಾ ಕಾರ್ಯಕರ್ತೆಯರ ಸಂಯುಕ್ತಾಶ್ರಯದಲ್ಲಿ ಹತ್ತಿಮತ್ತೂರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಉಚಿತ ಶಿಬಿರ ಆಯೋಜಿಸಲಾಗಿದೆ.ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು.ಸಾರ್ವಜನಿಕ ಸ್ಥಳಗಳಲ್ಲಿ ಶಿಬಿರದ ಕರಪತ್ರಗಳನ್ನು ಹಂಚಲಾಯಿತು.
ಈ ಸಂದರ್ಭದಲ್ಲಿ ಹತ್ತಿಮತ್ತೂರ ಗ್ರಾಮ ಪಂಚಾಯತಿ ಸದಸ್ಯರಾದ ರಮೇಶಗೌಡ ಓಂಟಿಗೌಡರ,ಊರಿಯರಾದ ಗುಡ್ಡಪ್ಪ ಹಿರೇಗೌಡ್ರ,ಶೇಖಪ್ಪ ಹಳೇಮನಿ,ಈರಪಾಕ್ಷಪ್ಪ ಹಕಾರಿ,ಗುಡ್ಡಪ್ಪ ಯಲಗಚ್,ಬಸಪ್ಪ ಬಾದಾಮಿ, ಬಸವರಾಜ ಮಂಟಗಣಿ,ಹನಮಂತಪ್ಪ ಯಲಗಚ್,108 ಚಾಲಕರಾದ ರವಿಕುಮಾರ ಮರಾಠಿ ಸೇರಿದಂತೆ ಅನೇಕರು ಸಹಕಾರ ನೀಡಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 