ಮೀನುಗಾರರಿಗೆ ಉಚಿತ ಮೀನುಗಾರಿಕೆ ಕಿಟ್, ಮತ್ಸ್ಯವಾಹಿನಿ ವಾಹನ ಹಸ್ತಾಂತರಿಸಿದ: ಶಾಸಕ ಐಹೊಳೆ
Free fishing kits and Matsya Vahini vehicles handed over to fishermen: MLA Aihole
ರಾಯಬಾಗ, 01 : ಪ.ಜಾತಿ ಮತ್ತು ಪಂಗಡ ಮೀನುಗಾರರಿಗೆ ಮೀನುಗಾರಿಕೆ ಮಾಡಲು ಸರ್ಕಾರದಿಂದ ನೀಡುತ್ತಿರುವ ಉಚಿತ ಮೀನು ಹಿಡಿಯುವ ಸಲಕರಣೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಗುರುವಾರ ಪಟ್ಟಣದ ಶಾಸಕರ ಗೃಹಕಚೇರಿಯಲ್ಲಿ ಮೀನು ಮಾರುಕಟ್ಟೆ ಮತ್ತು ಮತ್ಸ್ಯವಾಹಿನಿ ಯೋಜನೆಯಡಿ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ಬೋರ್ಡ್ದಿಂದ ಫಲಾನುಭವಿ ಮೀನುಗಾರರಿಗೆ ಉಚಿತ ಮೀನುಗಾರಿಕೆ ಕಿಟ್ ಮತ್ತು ಮತ್ಸ್ಯವಾಹಿನಿ ವಾಹನ ಹಸ್ತಾಂತರಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ 25 ಬಡ ಮೀನುಗಾರರಿಗೆ ಮತ್ಸ್ಯ ಆಶ್ರಯ ಯೋಜನೆಯಡಿ ಮನೆಗಳನ್ನು ಹಂಚಲಾಗುತ್ತಿದೆ ಎಂದು ತಿಳಿಸಿದರು.
ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕ ರಂಗನಾಥ ಶಿಂಧೆ ಮಾತನಾಡಿ, ಜಿ.ಪಂ.ಯೋಜನೆಯಡಿ ಪ್ರತಿ ತಾಲೂಕಿನ ಇಬ್ಬರು ಪ.ಜಾತಿ ಮತ್ತು ಇಬ್ಬರು ಪ.ಪಂಗಡ ಮೀನುಗಾರರಿಗೆ ಮೀನುಗಾರಿಕೆ ಮಾಡಲು ಜೀವರಕ್ಷಕ ಕವಚ (ಜಾಕೇಟ್), ಬಲೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಅನೀಲ ಹಂಜೆ, ವಿನೋದ ಹಿರೇಮಠ, ಮಹೇಶ ಕರಮಡಿ, ಶ್ರವಣ ಕಾಂಬಳೆ, ಸಂಜಯ ಸನದಿ ಸೇರಿ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 