ಮೀನುಗಾರರಿಗೆ ಉಚಿತ ಮೀನುಗಾರಿಕೆ ಕಿಟ್, ಮತ್ಸ್ಯವಾಹಿನಿ ವಾಹನ ಹಸ್ತಾಂತರಿಸಿದ: ಶಾಸಕ ಐಹೊಳೆ
Free fishing kits and Matsya Vahini vehicles handed over to fishermen: MLA Aihole
ರಾಯಬಾಗ, 01 : ಪ.ಜಾತಿ ಮತ್ತು ಪಂಗಡ ಮೀನುಗಾರರಿಗೆ ಮೀನುಗಾರಿಕೆ ಮಾಡಲು ಸರ್ಕಾರದಿಂದ ನೀಡುತ್ತಿರುವ ಉಚಿತ ಮೀನು ಹಿಡಿಯುವ ಸಲಕರಣೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಗುರುವಾರ ಪಟ್ಟಣದ ಶಾಸಕರ ಗೃಹಕಚೇರಿಯಲ್ಲಿ ಮೀನು ಮಾರುಕಟ್ಟೆ ಮತ್ತು ಮತ್ಸ್ಯವಾಹಿನಿ ಯೋಜನೆಯಡಿ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ಬೋರ್ಡ್ದಿಂದ ಫಲಾನುಭವಿ ಮೀನುಗಾರರಿಗೆ ಉಚಿತ ಮೀನುಗಾರಿಕೆ ಕಿಟ್ ಮತ್ತು ಮತ್ಸ್ಯವಾಹಿನಿ ವಾಹನ ಹಸ್ತಾಂತರಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ 25 ಬಡ ಮೀನುಗಾರರಿಗೆ ಮತ್ಸ್ಯ ಆಶ್ರಯ ಯೋಜನೆಯಡಿ ಮನೆಗಳನ್ನು ಹಂಚಲಾಗುತ್ತಿದೆ ಎಂದು ತಿಳಿಸಿದರು.
ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕ ರಂಗನಾಥ ಶಿಂಧೆ ಮಾತನಾಡಿ, ಜಿ.ಪಂ.ಯೋಜನೆಯಡಿ ಪ್ರತಿ ತಾಲೂಕಿನ ಇಬ್ಬರು ಪ.ಜಾತಿ ಮತ್ತು ಇಬ್ಬರು ಪ.ಪಂಗಡ ಮೀನುಗಾರರಿಗೆ ಮೀನುಗಾರಿಕೆ ಮಾಡಲು ಜೀವರಕ್ಷಕ ಕವಚ (ಜಾಕೇಟ್), ಬಲೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಅನೀಲ ಹಂಜೆ, ವಿನೋದ ಹಿರೇಮಠ, ಮಹೇಶ ಕರಮಡಿ, ಶ್ರವಣ ಕಾಂಬಳೆ, ಸಂಜಯ ಸನದಿ ಸೇರಿ ಅನೇಕರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 