ಮೀನುಗಾರರಿಗೆ ಉಚಿತ ಮೀನುಗಾರಿಕೆ ಕಿಟ್, ಮತ್ಸ್ಯವಾಹಿನಿ ವಾಹನ ಹಸ್ತಾಂತರಿಸಿದ: ಶಾಸಕ ಐಹೊಳೆ
Free fishing kits and Matsya Vahini vehicles handed over to fishermen: MLA Aihole
ರಾಯಬಾಗ, 01 : ಪ.ಜಾತಿ ಮತ್ತು ಪಂಗಡ ಮೀನುಗಾರರಿಗೆ ಮೀನುಗಾರಿಕೆ ಮಾಡಲು ಸರ್ಕಾರದಿಂದ ನೀಡುತ್ತಿರುವ ಉಚಿತ ಮೀನು ಹಿಡಿಯುವ ಸಲಕರಣೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಗುರುವಾರ ಪಟ್ಟಣದ ಶಾಸಕರ ಗೃಹಕಚೇರಿಯಲ್ಲಿ ಮೀನು ಮಾರುಕಟ್ಟೆ ಮತ್ತು ಮತ್ಸ್ಯವಾಹಿನಿ ಯೋಜನೆಯಡಿ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ಬೋರ್ಡ್ದಿಂದ ಫಲಾನುಭವಿ ಮೀನುಗಾರರಿಗೆ ಉಚಿತ ಮೀನುಗಾರಿಕೆ ಕಿಟ್ ಮತ್ತು ಮತ್ಸ್ಯವಾಹಿನಿ ವಾಹನ ಹಸ್ತಾಂತರಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ 25 ಬಡ ಮೀನುಗಾರರಿಗೆ ಮತ್ಸ್ಯ ಆಶ್ರಯ ಯೋಜನೆಯಡಿ ಮನೆಗಳನ್ನು ಹಂಚಲಾಗುತ್ತಿದೆ ಎಂದು ತಿಳಿಸಿದರು.
ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕ ರಂಗನಾಥ ಶಿಂಧೆ ಮಾತನಾಡಿ, ಜಿ.ಪಂ.ಯೋಜನೆಯಡಿ ಪ್ರತಿ ತಾಲೂಕಿನ ಇಬ್ಬರು ಪ.ಜಾತಿ ಮತ್ತು ಇಬ್ಬರು ಪ.ಪಂಗಡ ಮೀನುಗಾರರಿಗೆ ಮೀನುಗಾರಿಕೆ ಮಾಡಲು ಜೀವರಕ್ಷಕ ಕವಚ (ಜಾಕೇಟ್), ಬಲೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಅನೀಲ ಹಂಜೆ, ವಿನೋದ ಹಿರೇಮಠ, ಮಹೇಶ ಕರಮಡಿ, ಶ್ರವಣ ಕಾಂಬಳೆ, ಸಂಜಯ ಸನದಿ ಸೇರಿ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 