ವಿಕಲ ಚೇತನ ಮಕ್ಕಳಿಗೆ ಉಚಿತ ಕ್ಷೌರ ಸೇವೆ
Free haircut service for mentally challenged children
ಯಮಕನಮರಡಿ 09: ಶಿವಶರಣ ಹಡಪದ ಅಪ್ಪಣ್ಣ ಸಮಾಜ ಹಾಗೂ ಯುವಕ ಸಂಘ ಹುಕ್ಕೇರಿ ಇವರ ಆಶ್ರಯದಲ್ಲಿ ಶಿವಶರಣ ಹಡಪದ ಜಯಂತಿ ಪ್ರಯುಕ್ತ ಹಿಡಕಲ್ ಡ್ಯಾಮಿನಲ್ಲಿ ದೂದ್ ನಾನಾ ವಿಕಾಸ ಶಿಕ್ಷಣ ಸಂಸ್ಥೆ ಬುದ್ಧಿ ವಿಕಲಚೇತನ ಮಕ್ಕಳ ವಸತಿ ಯೂಥ್ ಶಾಲೆಯಲ್ಲಿ ಮಂಗಳವಾರ ದಿ. 8/ರಂದು ಬುದ್ಧಿಮಾಂದ್ಯ ಮಕ್ಕಳಿಗೆ ಉಚಿತ ಕ್ಷೌರಿಕ ಸೇವೆ ಮಾಡಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಲೇಖಕ ಶಿವಾನಂದ್ ನಾವಿ ಮಾತನಾಡಿ ಶಿವಶರಣರ ಹಡಪದ ಅಪ್ಪಣ್ಣ ಸಮಾಜ ಬಾಂಧವರು ಪ್ರತಿ ವರ್ಷ ವಿಕಲಚೇತನ ಮಕ್ಕಳಿಗೆ ಕ್ಷೌರಿಕ ಸೇವೆ ನೀಡುವುದರ ಮೂಲಕ ನಿಸ್ವಾರ್ಥ ಸೇವೆ ಮಾಡುತ್ತಿದ್ದಾರೆ. ಈ ಸಂಘಟನೆಯು ಸಮಾಜದ ಸೇವೆಯು ಅಮೂಲ್ಯವಾಗಿದೆ. 12ನೇ ಶತಮಾನದ ಮಾನವತಾವಾದಿ ಬಸವಣ್ಣನವರ ಅನುಯಾಯಿಗಳಾಗಿ ಸಮಾಜ ಸೇವೆ ಮಾಡುತ್ತಿದ್ದಾರೆ. ಸರ್ಕಾರವು ಈ ಸಮಾಜದ ಬಾಂಧವರನ್ನು ಬೆಳಗಲು ಸೌಲಭ್ಯಗಳನ್ನು ನೀಡಬೇಕೆಂದು ಹೇಳಿದರು. ಮುಖ್ಯ ಶಿಕ್ಷಕ ಬಿ ಬಿ ಸಂಕನ್ನವರ್ ಶಿವಶರಣ ಹಡಪದ ಅಪ್ಪಣ್ಣ ಸಂಘದವರು ಮಾಡುತ್ತಿರುವುದು ಅಮೂಲ್ಯ. ಇವರಂತಹ ಸೇವಾ ಮನೋಭಾವ ಎಲ್ಲರಲ್ಲೂ ಮೊದಲು ಮುಂದೆ ಬರಬೇಕು ಎಂದರು.ಅಧ್ಯಕ್ಷತೆಯನ್ನು ಶಿವ ಶರಣ ಹಡಪದ ಅಪ್ಪಣ್ಣ ಸಮಾಜದ ಹಾಗೂ ಯುವಕ ಸಂಘದ ಬೆಳಗಾವಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್ ಕುರ್ಲಿ ವಹಿಸಿದ್ದರು. ವೀರಭದ್ರ ನಾವಿ, ಸಚಿನ್ ನಾವಿ, ಕಿರಣ್ ನನದಿ, ಆಕಾಶ್ ನಾವಿ, ವಿನೋದ್ ಯರನಾಳ, ರವಿ ಕೋರೆ, ಮಾಂತೇಶ್ ಖಾನಾಪುರ್, ವಿಠಲ ನಾವಿ, ಸಂತೋಷ್ ನಾವಿ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷರು, ರಮೇಶ್ ನಾವಿ ಹುಕ್ಕೇರಿ ತಾಲೂಕ ಉಪಾಧ್ಯಕ್ಷರು ಹಾಗೂ ಶಿಕ್ಷಕರು ಶಿಕ್ಷಕೇತರ ಸಿಬ್ಬಂದಿ ವರ್ಗದವರು ಬುದ್ಧಿಮಾಂದ್ಯ ಮಕ್ಕಳು ಇದ್ದರು. ನಂತರ ಅನ್ನ ಸಂತರೆ್ಣ ಮಾಡಲಾಯಿತು
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 