ಉಚಿತ ಅರೋಗ್ಯ ತಪಾಸಣೆ : ರಕ್ತದಾನ, ದೇಹದಾನ, ನೇತ್ರದಾನ ಶಿಬಿರ
Free health check-up: Blood donation, body donation, eye donation camp
ವಿಜಯಪುರ 28: ದೇಹದಾನ ಮಾಡುವುದರಿಂದ ಅಂಗಾಂಗ ಅಗತ್ಯವಿರುವ ರೋಗಿಗಳಿಗೆ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಸ್ಟೇಟ್ ಬ್ಯಾಂಕಿನ ರೀಜನಲ್ ಮ್ಯಾನೇಜರ ಸಂತೋಷ ನಾಯಕ ಹೇಳಿದ್ದಾರೆ.
ಗುರುವಾರ ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಟ್ರಾಮಾ ಸೆಂಟರ್ ಹಾಗೂ ರಕ್ತನಿಧಿ ಕೇಂದ್ರದ ವತಿಯಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಎಸ್.ಬಿ.ಐ 70ನೇ ಫೌಂಡೇಶನ್ ದಿನದ ಅಂಗವಾಗಿ ಬ್ಯಾಂಕಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ಆಯೋಜಿಸಲಾಗಿದ್ದ ಉಚಿತ ಅರೋಗ್ಯ ತಪಾಸಣೆ, ರಕ್ತದಾನ, ದೇಹದಾನ, ನೇತ್ರದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ದೇಹ ದಾನ ಶ್ರೇಷ್ಟ ದಾನವಾಗಿದೆ. ಇದರಿಂದ ಮರಣ ನಂತರವೂ ಅಂಗಾಂಗಗಳನ್ನು ಅಗತ್ಯವಿರುವ ರೋಗಿಗಳಿಗೆ ದಾನ ಮಾಡಬಹುದು. ಅಲ್ಲದೇ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೂ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು. ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಮಾತನಾಡಿ, ದೇಹದಾನ, ಅಂಗದಾನ, ರಕ್ತದಾನ, ಮಾಡುವಲ್ಲಿ ಆಸಕ್ತಿ ತೋರಿರುವ ಸ್ಟೇಟ್ ಬ್ಯಾಂಕ ಸಿಬ್ಬಂದಿ ಮತ್ತು ಅಧಿಕಾರಿಗಳ ಸಾಮಾಜಿಕ ಕಳಕಳಿ ನಮ್ಮ ಮುಂದಿನ ಪೀಳಿಗೆಗೆ ಪ್ರೇರಣೆಯಾಗಿದೆ. ಅಲ್ಲದೇ, ಕರ್ತವ್ಯ ಮತ್ತು ಸ ಾಮಾಜಿಕ ಜವಾಬ್ದಾರಿಗೆ ಪ್ರಮುಖ ಪಾತ್ರ ವಹಿಸಲು ಅವಕಾಶ ನೀಡುತ್ತದೆ ಎಂದು ಅವರು ಹೇಳಿದರು.
ಈ ಶಿಬಿರದಲ್ಲಿ ಟ್ರಾಮಾ ಸೆಂಟರ್ ಮುಖ್ಯ ವೈದ್ಯಾಧಿಕಾರಿ ಡಾ. ಈರಣ್ಣ ಎಸ್. ಧಾರವಾಡಕರ, ಆಸ್ಪತ್ರೆಯ ವೈದ್ಯರಾದ ಡಾ. ವಿಜಯಕುಮಾರ ವಾರದ, ಡಾ ಅನುಜಾ ಭಾವಿ, ಡಾ. ರಾಹುಲ ಬಿರಾದಾರ, ಬ್ಯಾಂಕಿನ ಮ್ಯಾನೇಜರ ರವೀಂದ್ರ ರತ್ನಾಕರ, ಚೀಫ್ ಮ್ಯಾನೇಜರ್ ರಂಜಿತಕುಮಾರ, ಬಿ.ಎಲ್.ಡಿ.ಇ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ ಸತೀಶ ಆರಕೇರಿ, ಡಾ. ಭಾಗ್ಯಶಾಲಿ, ಆಸ್ಪತ್ರೆಯ ಸಿಬ್ಬಂದಿಯಾದ ಸಿದ್ದು ಪೂಜಾರಿ, ದೀಪಕ ಸಾವಂತ, ರಾಜಶೇಖರ್ ಚಿನಿವಾರ, ಶ್ರೀಶೈಲ ಕುಂಬಾರ, ದ್ರಾಕ್ಷಾಯಣಿ ಶಟಗಾರ, ವಿನೋದ್ ಗಲಗಲಿ, ವಿಲಾಸ್ ಜಾದವ, ಶಶಿಕಾಂತ ಕೋಳಿ, ಸ್ನಾತಕೋತ್ತರ ವಿದ್ಯಾರ್ಥಿಗಳು ಮುಂತಾದವರು ಉಪಸ್ಥಿತರಿದ್ದರು. ಈ ಶಿಬಿರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ 40 ಜನ ಸಿಬ್ಬಂದಿ ರಕ್ತದಾನ ಮಾಡಿದರು.
ಅಲ್ಲದೇ, ಇಬ್ಬರು ಸಿಬ್ಬಂದಿ ತಮ್ಮ ದೇಹದಾನದ ಹಾಗೂ ಏಳು ಜನ ಸಿಬ್ಬಂದಿ ನೇತ್ರದಾನದ ಮಾಡಲು ನೋಂದಣಿ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 