ಹಿರಿಯ ನಾಗರಿಕರ ಉಚಿತ ಆರೋಗ್ಯ ತಪಾಸಣೆ
Free health check-up for senior citizens
ಸಂಕೇಶ್ವರ 24: ಹಿರಿಯ ನಾಗರಿಕರು ತಮ್ಮ ಆರೋಗ್ಯದ ಬಗೆಗೆ ತೀವ್ರ ಕಾಳಜಿ ವಹಿಸಬೇಕು ಎಂದು ಮಲ್ಲಿಕಾರ್ಜುನ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಹೇಳಿದರು.
ಅವರು ಸಂಕೇಶ್ವರದಲ್ಲಿ ಹಿರಿಯ ಶಿಕ್ಷಕ ದಿವಂಗತ ಡಿ.ವಿ.ಪಟ್ಟಣಶೆಟ್ಟಿ ಅವರ ಸ್ಮರಣಾರ್ಥ ಶುಕ್ರವಾರ ಮಲ್ಲಿಕಾರ್ಜುನ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಏರಿ್ಡಸಿದ್ದ ಹಿರಿಯ ನಾಗರಿಕರ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಹಿರಿಯ ನಾಗರಿಕರ ವಯೋಮಾನಕ್ಕೆ ಅನುಗುಣವಾಗಿ ದೇಹವು ವಿಭಿನ್ನ ಸಮಸ್ಯೆಗಳನ್ನು ಎದುರಿಸುತ್ತಿರುತ್ತದೆ. ಸಕ್ಕರೆ ಕಾಯಿಲೆ, ರಕ್ತದೊತ್ತಡ, ಕಡಿಮೆಯಾಗುವ ಎಲುಬಿನ ಸಾಂದ್ರತೆ,ಮೊನಕಾಲು ನೋವು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ. ಇಂಥ ಸಂದರ್ಭದಲ್ಲಿ ತಕ್ಷಣವೇ ಆರೋಗ್ಯ ತಪಾಸಣೆ ಮಾಡಿಕೊಂಡು ತಕ್ಷಣವೇ ಓಷಧಿಗಳನ್ನು ತೆಗೆದುಕೊಳ್ಳಬೇಕೆಂದು ಅವರು ಹೇಳಿದರು.
ಶಿಬಿರದಲ್ಲಿ ಸಂಕೇಶ್ವರ ಮಿಷನ್ ಆಸ್ಪತ್ರೆಯ ವೈದ್ಯರ ತಂಡವು 65 ಹಿರಿಯ ನಾಗರಿಕರ ಆರೋಗ್ಯ ತಪಾಸಿಸಿ ಸಲಹೆಗಳನ್ನು ನೀಡಿತು.ಮಲ್ಲಿಕಾರ್ಜುನ ಸೌಹಾರ್ದ ಸಹಕಾರಿ ಸಂಘದ ವತಿಯಿಂದ 22 ಸಾವಿರ ರೂಪಾಯಿ ಮೌಲ್ಯದ ಓಷಧಿಗಳನ್ನು ಹಿರಿಯ ನಾಗರಿಕರಿಗೆ ಉಚಿತವಾಗಿ ನೀಡಲಾಯಿತು.
ಶಿಬಿರದಲ್ಲಿ ಹಿರಿಯ ಸಹಕಾರಿ ಧುರೀಣರಾದ ಎಸ್.ಎಸ್.ಶಿರಕೋಳಿ, ಶಿವಾನಂದ ಸಂಸುದ್ದಿ, ಪ್ರಕಾಶ ಕಣಗಲಿ, ತಾಲೂಕಾ ವೈದ್ಯಾಧಿಕಾರಿ ಡಾ.ಉದಯ ಕುಡಚಿ, ಸಂಕೇಶ್ವರ ವೈದ್ಯರ ಸಂಘದ ಅಧ್ಯಕ್ಷ ವಿಕಾಸ ಪಾಟೀಲ, ಚಂದ್ರಕಾಂತ ಪಾಟೀಲ, ಮಂದಾರ ಹಾವಳ, ವಿನೋದ ಗಾಯಕವಾಡ, ಕಲ್ಪನಾ ಮನ್ನಿಕೇರಿ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 