ಉಚಿತ ಆರೋಗ್ಯ ತಪಾಸಣೆ ಹಾಗೂ ಔಷದೋಪಚಾರ ಶಿಬಿರದ ಸದುಪಯೋಗಕ್ಕೆ ಕರೆ
ಲೋಕದರ್ಶನ ವರದಿ
ರಾಮದುರ್ಗ, 28: ಪಟ್ಟಣದ ಆಸ್ಪತ್ರೆಯಲ್ಲಿ ವೈದ್ಯರುಗಳ ಕೊರತೆಯಿಂದ ಜನತೆಗೆ ಆಗುತ್ತಿರುವ ತೊಂದರೆ ನಿವಾರಿಸುವ ನಿಟ್ಟಿನಲ್ಲಿ ಮಾರ್ಚ-2 ರಂದು ಶನಿವಾರ ಮುಂಜಾನೆ-9-30 ರಿಂದ 4 ಗಂಟೆವರೆಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಔಷದೋಪಚಾರ ವಿತರಣಾ ಕಾರ್ಯಕ್ರಮವನ್ನು ಪಟ್ಟಣದ ಹಳೇ ಬಸ್ ನಿಲ್ದಾಣದ ಎದುರುಗಡೆ ಇರುವ ವಿದ್ಯಾಚೇತನ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯುವ ಧುರೀಣ ಮಲ್ಲಣ್ಣ ಯಾದವಾಡ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಕೆ.ಎಲ್.ಇ ಸಂಸ್ಥೆಯ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯ, ಪ್ರಭಾಕರ ಕೋರೆ ಉಚಿತ ಆಸ್ಪತ್ರೆ, ಬಟಕುಕರ್ಿಯ ಶ್ರೀ ಈರಮ್ಮ ಶಿವಲಿಂಗಪ್ಪ ಯಾದವಾಡ ಸ್ಮಾರಕ ಸೇವಾ ಸಮಿತಿ, ರೋಟರಿ ಇನ್ನರವ್ಹೀಲ್ ಸಂಸ್ಥೆ ಹಾಗೂ ರಾಮದುರ್ಗ ಪ್ರೆಸ್ ಕ್ಲಬ್ ನೇತೃತ್ವದಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಕೆ.ಎಲ್.ಇ ಸಂಸ್ತೆಯ ಸುಮಾರು 80-85 ನುರಿತ ಅನುಭವಿ ತಜ್ಞವೈಧ್ಯರುಗಳು, 40-50 ಸ್ಟಾಪ್ ನರ್ಸಗಳನ್ನೊಳಗೊಂಡ 22 ಕೌಂಟರ್ಗಳಲ್ಲಿ ಆರೋಗ್ಯ ತಪಾಸಣೆ ನಡೆಲಾಗುತ್ತಿದೆ. ಕ್ಯಾನ್ಸರ್ ಹೊರತುಪಡಿಸಿ ಎಲ್ಲ ರೋಗಗಳ ತಪಾಸಣೆ ನಡೆಸಿ ಔಷದೋಪಚಾರವನ್ನು ಒದಗಿಸುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅಗತ್ಯವಿದ್ದಲ್ಲಿ ತಜ್ಞ ವೈಧ್ಯರ ಸಲಹೆಯ ಮೇರೆಗೆ ಕೆ.ಎಲ್.ಸಿ ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತ್ರ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ತಾಲೂಕಿನ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿರುವ ಐಎನ್ಟಿ ಮಕ್ಕಳಿಗೆ, ಅಂಗವಿಕಲರಿಗೂ ಆರೋಗ್ಯ ತಪಾಸಣೆ ಸೇವೆ ಲಭ್ಯವಿದ್ದು ತಾಲೂಕಿನ ಜನತೆ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕ ಎಂದು ಮಲ್ಲಣ್ಣ ಯಾದವಾಡ ಹೇಳಿದರು.
ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೆ.ಎಲ್.ಸಿ ಸಂಸ್ಥೆಯ ಕಾಯರ್ಾಧ್ಯಕ್ಷ ಹಾಗೂ ರಾಜ್ಯ ಸಭಾ ಸದಸ್ಯ ಪ್ರಭಾಕರ ಕೋರೆ, ವಿ.ಪ ಸದಸ್ಯ ಮಹಾಂತೇಶ ಕವಟಗಿಮಠ, ಶಾಸಕ ಮಹಾದೇವಪ್ಪ ಯಾದವಾಡ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಮಹಾದೇವ ಚಿನ್ನಾಕಟ್ಟಿ, ಬಸವರಾಜ ಬಸವರಾಜ ಉದುಪಡಿ, ನಾಗರಾಜ ಕಟ್ಟಿಮನಿ, ಶಿವಾನಂದ ಗುರುಬಸಣ್ಣನವರ, ವಿಜಯ ನಾಯಕ ಸೇರಿದಂತೆ ಹಲವರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 