ಇಂದು ಉಚಿತ ಹೃದಯರೋಗ ತಪಾಸಣಾ ಶಿಬಿರ
Free heart disease check-up camp today
ಬೀಳಗಿ 31: ತಾಲೂಕಿನ ಯಡಹಳ್ಳಿ ಗ್ರಾಮದ ಗ್ರಾಪಂ ಕಾರ್ಯಾಲಯದ ಎದುರು ಇರುವ ಹಳೆ ಕನ್ನಡ ಶಾಲಾ ಆವರಣದಲ್ಲಿ ದಿ.01.ರಂದು ಮುಂ.9.00 ಗಂಟೆಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಉಚಿತ ಹೃದಯರೋಗ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೃದಯರೋಗ ತಜ್ಞ ಡಾ.ವಿಕ್ರಮ್ ಎಸ್ ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ 27 ವರ್ಷಗಳ ಹಿಂದೆ ಲಂಡನ್ ರಾಷ್ಟ್ರದಿಂದ ಡಾ. ಪ್ರೋ ಸ್ಟಾಬಿಲಿ ಅವರು ಈ ಭಾಗದ ಹಳ್ಳಿಗಳಿಗೆ ಭೇಟಿ ನೀಡಿ ಹೃದಯರೋಗ ತಪಾಸಣೆ ಮಾಡಿ ಹಲವಾರು ಜನರಿಗೆ ಉಪಯೋಗ ಆಗುವ ಚಿಕಿತ್ಸೆ ನೀಡಿದ್ದು ನನ್ನನ್ನು ಹೃದಯರೋಗ ಡಾಕ್ಟರ್ ಆಗುವಂತೆ ಮಾಡಿದ್ದು ಬೆಂಗಳೂರಿನ ಪ್ರತಿಷ್ಠಿತ ಹೃದಯರೋಗ ಆಸ್ಪತ್ರೆಯಲ್ಲಿ ಡಾ ಸಿ ಎನ್ ಮಂಜುನಾಥ ಅವರ ಹತ್ತಿರ ಹಲವಾರು ಹೃದಯರೋಗಗಳಿಗೆ ಚಿಕಿತ್ಸೆ ನೀಡುತ್ತಿದ್ದೇನೆ, ಹಿರಿಯರು ದೊಡ್ಡಪ್ಪನವರಾದ ಶಾಸಕ ಜೆ ಟಿ ಪಾಟೀಲ್ ಹಾಗೂ ತಂದೆಯವರಾದ ಶಿವನಗೌಡ ಟಿ ಪಾಟೀಲ ಅವರ ಜನಸೇವೆ ಗಮನಿಸಿ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರತಿ ತಿಂಗಳು ಇಂತಹ ಶಿಬಿರ ಹಮ್ಮಿಕೊಳ್ಳಬೇಕು ಎಂದು ಕನ್ನಡ ರಾಜ್ಯೋತ್ಸವ ದಿನದಂದು ಈ ಶಿಬಿರ ಆರಂಭ ಮಾಡಿ ಈ ಭಾಗದ ಜನರ ಸೇವೆ ಮಾಡಬೇಕು ಎಂದು ಉದ್ದೇಶಿಸಲಾಗಿದೆ ಎಂದರು.
ಡಾ ಆರ್ ಟಿ ಪಾಟೀಲ್ ಅವರ ನೇತ್ರತ್ವದಲ್ಲಿ ಜರುಗುವ ಈ ಶಿಬಿರದ ಸಾನಿಧ್ಯವನ್ನು ಮರೆಗುದ್ದಿ ದಿಗಂಬರೇಶ್ವರ ಸ್ವಾಮೀಜಿ ವಹಿಸಲಿದ್ದು, ಹಿರಿಯರಾದ ಡಾ.ಎಂ.ಆರ್.ದೇಸಾಯಿ ಅವರು ಉದ್ಘಾಟಿಸಲಿದ್ದಾರೆ ಎಂದರು.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 