ಶ್ರೀ ಕೊರೆಮ್ಮ ದೇವಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಸಾಮಗ್ರಿ ವಿತರಣೆ
Free learning materials distributed to Sri Koremma Devi Government School students
ಶ್ರೀ ಕೊರೆಮ್ಮ ದೇವಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಸಾಮಗ್ರಿ ವಿತರಣೆ
ರನ್ನ ಬೆಳಗಲಿ 01: ಪಟ್ಟಣದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊರೆಮ್ಮ ದೇವಿ ತೋಟದ ವಿದ್ಯಾರ್ಥಿಗಳಿಗೆ ಬುಧವಾರ ದಂದು ನವಚೇತನ ಟ್ರಸ್ಟ್ ಕಮಿಟಿ ರಾಮನಗರ ಮತ್ತು ಅನಿಕೇತನ ವಿಕಲಚೇತನರ ಸಂಘ ಮಹಾಲಿಂಗಪುರ ಆಶ್ರಯದಲ್ಲಿ ಉಚಿತ ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮ ಜರಗಿತು. ಸಾಧನೆಗೆ ಅಂಗವೈಕಲ್ಯ ಶಾಪವಲ್ಲ ನಾನು ಅಂಗವಿಕಲನಾಗಿ, ಅಂಗವಿಕಲ ಇಂಡಿಯಾ ಕಬಡ್ಡಿ ಟೀಮ್ ಕ್ಯಾಪ್ಟನ್, ಅಂತರಾಷ್ಟ್ರ ಮಟ್ಟದ ಕಬ್ಬಡಿ ಕ್ರೀಡೆಯಲ್ಲಿ ಭಾಗವಹಿಸುತ್ತಿದ್ದೇನೆ. ಆದ್ದರಿಂದ ನಿರಂತರ ಪರಿಶ್ರಮ,ನಿತ್ಯ ವಿದ್ಯಾಭ್ಯಾಸ ಮಾಡುತ್ತಿದ್ದರೆ ನಿಮ್ಮ ಕನಸುಗಳು ನನಸಾಗುತ್ತದೆ ಎಂದು ಶೇಖರ ಕಾಖಂಡಕಿ ಕಬ್ಬಡ್ಡಿ ಅಂತರಾಷ್ಟ್ರೀಯ ಕ್ರೀಡಾಪಟು ತಿಳಿಸಿದರು.ಜಿಲ್ಲಾ ವಿಕಲಚೇತನ ಸಂಘದ ಅಧ್ಯಕ್ಷರಾದ ರಾಜು ತೇರದಾಳ, ಮುಖ್ಯೋಪಾಧ್ಯಾಯರಾದ ವಾಯ್ ಎಚ್ ಪೂಜಾರಿ ಮತ್ತು ಯೋಗ ಶಿಕ್ಷಕರಾದ ರಾಘವೇಂದ್ರ ನೀಲಣ್ಣವರ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಕಾರ್ಯಕ್ರಮದ ಕುರಿತು ಮಾತನಾಡಿದರು.ಶಿಕ್ಷಕಿಯರಾದ ರೂಪಾ ಹಾದಿಮನಿ,ರೇಖಾ ತಿಮ್ಮಪೂರ ಹಾಗೂ ಆರೂನಭಿ ತೇರದಾಳ,ಬಂದವ್ವ ದೋಬಸಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 