ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಪೆನ್ನು, ಪೆನ್ಸಿಲ್ ವಿತರಣೆ
Free notebooks, pens, pencils distributed to school children
ಕಂಪಿ 10: ತಾಲೂಕಿನ ನಂ.10 ಮುದ್ದಾಪುರ ಗ್ರಾಮದ ಬಳಿಯ ಯಲ್ಲಪ್ಪಕ್ಯಾಂಪಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಜನ್ಮದಿನದ ಅಂಗವಾಗಿ ಕಂಪ್ಲಿ ಕ್ಷೇತ್ರ ಘಟಕದಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್, ಪೆನ್, ಪನ್ಸಿಲ್ ಮಂಗಳವಾರ ವಿತರಿಸಿದರು.
ಕರವೇ ಕಂಪ್ಲಿ ಕ್ಷೇತ್ರ ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ಮಾತನಾಡಿ, ಕರವೇ ಹುಟ್ಟು ಹಾಕಿ, ನಾಡು ನುಡಿಗಾಗಿ ಹರಲಿರುಳು ಹೋರಾಟ ಮಾಡಿದ್ದಾರೆ. ಕನ್ನಡಾಭಿಮಾನಕ್ಕಾಗಿ ಸಾಕಷ್ಟು ಕಷ್ಟಗಳನ್ನು ಪಟ್ಟಿದ್ದಾರೆ. ಇದರಿಂದ ಕನ್ನಡ ನಾಡಿನಾದ್ಯಂತ ರಾರಾಜಿಸುವಂತಾಗಿದೆ. ಸರ್ಕಾರ ಕಡ್ಡಾಯವಾಗಿ ಕನ್ನಡ ಪರಿಪಾಲನೆಗೆ ಸೂಕ್ತಕ್ರಮವಹಿಸಬೇಕು. ನಾಡು-ನುಡಿ ರಕ್ಷಣೆಗಾಗಿ ಹೊರಾಟ ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆ ಇಡೀ ವಿಶ್ವದಲ್ಲಿಯೇ ಅತಿ ಹೆಚ್ಚು ಶಾಖೆಗಳನ್ನು ಹೊಂದಿರುವ ಹೆಗ್ಗಳಿಕೆಯನ್ನು ಹೊಂದಿದೆ. ನಾಡು ನುಡಿ ವಿಚಾರದಲ್ಲಿ ಹೋರಾಟ ಮಾಡುತ್ತಿರುವ ನಮ್ಮಂತಹ ನೂರಾರು ಕನ್ನಡದ ಕಟ್ಟಾಳುಗಳನ್ನು ಬೆಳೆಸಿ ನಾಯಕರನ್ನಾಗಿ ಮಾಡಿದ ಕೀರ್ತಿ ನಾರಾಯಣಗೌಡರಿಗೆ ಸಲ್ಲುತ್ತದೆ. ಇವರ ಜನ್ಮದಿನದ ಪ್ರಯುಕ್ತ ಇಲ್ಲಿನ ಸರ್ಕಾರಿ ಶಾಲೆಯ 40 ಮಕ್ಕಳಿಗೆ ನೋಟ್ ಪುಸ್ತಕ, ಲೇಖನಿ ಸಾಮಾಗ್ರಿಗಳನ್ನು ವಿತರಿಸಲಾಯಿತು ಎಂದರು.
ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಚಂದ್ರಶೇಖರ, ಮುಖ್ಯಗುರು ಜೆ.ವೆಂಕೋಬಪ್ಪ, ಕ್ಷೇತ್ರ ಗೌರವಾಧ್ಯಕ್ಷ ಬಿ.ವಿ.ಗೌಡ, ಉಪಾಧ್ಯಕ್ಷ ಡಿಸ್ ಪ್ರಸಾದ್, ನಗರ ಘಟಕ ಅಧ್ಯಕ್ಷ ಜಿ.ನಾಗರಾಜ, ಉಪಾಧ್ಯಕ್ಷ ಹೂಗಾರ ಗಣೇಶ, ವಿದ್ಯಾರ್ಥಿ ಘಟಕ ಅಧ್ಯಕ್ಷ ಮುನ್ನಾ, ಪದಾಧಿಕಾರಿಗಳಾದ ಜಿ.ವೀರನಗೌಡ, ಪಿ.ರಾಘವೇಂದ್ರ, ರಾಮಚಂದ್ರ, ಗೌಳೇರು ಮಂಜುನಾಥ, ಪ್ರವೀಣ, ಬಸವರಾಜ, ಯಲ್ಲಪ್ಪ ಹಾಗೂ ಶಾಲಾ ಮಕ್ಕಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 