ಮಕ್ಕಳಿಗೆ ಉಚಿತ ಶಾಲಾ ಸಾಮಾಗ್ರಿ ವಿತರಣೆ
Free school supplies distribution to children
ಕಂಪ್ಲಿ 02: ಸ್ಥಳೀಯ ಅಂಬೇಡ್ಕರ್ ವೃತ್ತದ ಬಳಿಯಲ್ಲಿರುವ ಬೃಹತ್ ಕಟೌಟ್ ಮುಂಭಾಗದಲ್ಲಿ ಬಳ್ಳಾರಿ ಜಿಲ್ಲಾ ವೀರಶೈವ ಲಿಂಗಾಯತ ಮಹಾ ವೇದಿಕೆಯ ಬಳ್ಳಾರಿ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ ನೇತೃತ್ವದಲ್ಲಿ ಜನಪ್ರಿಯ ನಾಯಕ, ಅಭಿವೃದ್ಧಿಯ ಹರಿಕಾರ ಶಾಸಕ ಜೆ.ಎನ್.ಗಣೇಶ ಸಮ್ಮುಖದಲ್ಲಿ ಅವರ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸುವ ಜತೆಗೆ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಾಗ್ರಿಗಳನ್ನು ಸೋಮವಾರ ವಿತರಿದಲಾಯಿತು.
ಜೂನ್ 5ರಂದು ಶಾಸಕ ಗಣೇಶ ಅವರ ಜನ್ಮದಿನಾಚರಣೆ ಆಚರಿಸಿಕೊಳ್ಳುವ ಹಿನ್ನಲೆಯಲ್ಲಿ ಇಲ್ಲಿನ ಅಂಬೇಡ್ಕರ್ ವೃತ್ತದ ಬಳಿಯಲ್ಲಿ ಕೇಕ್ ಕತ್ತರಿಸಿ, ವಿಶ್ವಗುರು ಬಸವಣ್ಣನ ನೆನಪಿನ ಕಾಣಿಕೆ ನೀಡುವ ಮೂಲಕ ಸಂಭ್ರಮದಿಂದ ಜನ್ಮದಿನಾಚರಣೆ ಆಚರಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಉಸ್ಮಾನ್, ಸದಸ್ಯರಾದ ಸಿ.ಆರ್.ಹನುಮಂತ, ಮೌಲಾ, ವೀರಾಂಜಿನೇಯ, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಮುಖಂಡರಾದ ಪಿ.ಮೂಕಯ್ಯಸ್ವಾಮಿ, ಬಿ.ನಾರಾಯಣಪ್ಪ, ಹೊನ್ನಳ್ಳಿ, ಗಂಗಾಧರ, ಮೆಟ್ರಿ ರಾಜ, ಬಳೆ ಮಲ್ಲಿಕಾರ್ಜುನ, ಜಿ.ಮರೇಗೌಡ, ಜಾಫರ್, ರಮೇಶ ನಾಯಕ, ಕಾಳಿಂಗ ವರ್ಧನ, ಸೇರಿದಂತೆ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 