ಮಕ್ಕಳಿಗೆ ಉಚಿತ ಶಾಲಾ ಸಾಮಾಗ್ರಿ ವಿತರಣೆ
Free school supplies distribution to children
ಕಂಪ್ಲಿ 02: ಸ್ಥಳೀಯ ಅಂಬೇಡ್ಕರ್ ವೃತ್ತದ ಬಳಿಯಲ್ಲಿರುವ ಬೃಹತ್ ಕಟೌಟ್ ಮುಂಭಾಗದಲ್ಲಿ ಬಳ್ಳಾರಿ ಜಿಲ್ಲಾ ವೀರಶೈವ ಲಿಂಗಾಯತ ಮಹಾ ವೇದಿಕೆಯ ಬಳ್ಳಾರಿ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ ನೇತೃತ್ವದಲ್ಲಿ ಜನಪ್ರಿಯ ನಾಯಕ, ಅಭಿವೃದ್ಧಿಯ ಹರಿಕಾರ ಶಾಸಕ ಜೆ.ಎನ್.ಗಣೇಶ ಸಮ್ಮುಖದಲ್ಲಿ ಅವರ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸುವ ಜತೆಗೆ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಾಗ್ರಿಗಳನ್ನು ಸೋಮವಾರ ವಿತರಿದಲಾಯಿತು.
ಜೂನ್ 5ರಂದು ಶಾಸಕ ಗಣೇಶ ಅವರ ಜನ್ಮದಿನಾಚರಣೆ ಆಚರಿಸಿಕೊಳ್ಳುವ ಹಿನ್ನಲೆಯಲ್ಲಿ ಇಲ್ಲಿನ ಅಂಬೇಡ್ಕರ್ ವೃತ್ತದ ಬಳಿಯಲ್ಲಿ ಕೇಕ್ ಕತ್ತರಿಸಿ, ವಿಶ್ವಗುರು ಬಸವಣ್ಣನ ನೆನಪಿನ ಕಾಣಿಕೆ ನೀಡುವ ಮೂಲಕ ಸಂಭ್ರಮದಿಂದ ಜನ್ಮದಿನಾಚರಣೆ ಆಚರಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಉಸ್ಮಾನ್, ಸದಸ್ಯರಾದ ಸಿ.ಆರ್.ಹನುಮಂತ, ಮೌಲಾ, ವೀರಾಂಜಿನೇಯ, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಮುಖಂಡರಾದ ಪಿ.ಮೂಕಯ್ಯಸ್ವಾಮಿ, ಬಿ.ನಾರಾಯಣಪ್ಪ, ಹೊನ್ನಳ್ಳಿ, ಗಂಗಾಧರ, ಮೆಟ್ರಿ ರಾಜ, ಬಳೆ ಮಲ್ಲಿಕಾರ್ಜುನ, ಜಿ.ಮರೇಗೌಡ, ಜಾಫರ್, ರಮೇಶ ನಾಯಕ, ಕಾಳಿಂಗ ವರ್ಧನ, ಸೇರಿದಂತೆ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 