ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಕಚೇರಿಯಲ್ಲಿ ಉಚಿತ ಯೋಗ ಶಿಬಿರ ಆಯೋಜನೆ
Free yoga camp organized at Karnataka Bala Vikas Academy office
ಲೋಕದರ್ಶನ ವರದಿ
ಧಾರವಾಡ 07: ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಕಚೇರಿಯಲ್ಲಿ ಉಚಿತ ಯೋಗ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಇಂದು (ಏ.07) ಹಮ್ಮಿಕೊಳ್ಳಲಾಗಿತ್ತು. ಶಿಬಿರವನ್ನು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಅಡವೇಶ್ ಇಟಗಿ ಅವರು ಉದ್ಘಾಟಿಸಿ, ಮಾತನಾಡಿ, ಬೇಸಿಗೆ ಇರುವುದರಿಂದ ಮಕ್ಕಳು ಒಳಾಂಗಣ ಆಟಗಳನ್ನು ಆಡಬೇಕು. ಸರಿಯಾಗಿ ಪೌಷ್ಟಿಕ ಆಹಾರವನ್ನು ಸೇವಿಸಬೇಕು. ಜಾಸ್ತಿ ನೀರನ್ನು ಕುಡಿಯಬೇಕು. ಗಿಡ ಹತ್ತುವುದು, ಕೆರೆಗಳಿಂದ ದೂರ ಇರುವುದು, ಮೊಬೈಲ್ ಬಳಕೆ ಮಾಡದೇ ಇರುವುದು, ಮಕ್ಕಳು ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕು. ಯೋಗ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು. ಆಪ್ತ ಕಾರ್ಯದರ್ಶಿ ಅನ್ನಪೂರ್ಣ ಸಂಗಳದ ಮಾತನಾಡಿ ಯೋಗ ಶಿಬಿರದ ಕುರಿತು ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಶಿಬರದಲ್ಲಿ ಹುಬ್ಬಳ್ಳಿ ಧಾರವಾಡದ ಮಕ್ಕಳು ಭಾಗವಹಿಸಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 