ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಕಚೇರಿಯಲ್ಲಿ ಉಚಿತ ಯೋಗ ಶಿಬಿರ ಆಯೋಜನೆ
Free yoga camp organized at Karnataka Bala Vikas Academy office
ಲೋಕದರ್ಶನ ವರದಿ
ಧಾರವಾಡ 07: ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಕಚೇರಿಯಲ್ಲಿ ಉಚಿತ ಯೋಗ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಇಂದು (ಏ.07) ಹಮ್ಮಿಕೊಳ್ಳಲಾಗಿತ್ತು. ಶಿಬಿರವನ್ನು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಅಡವೇಶ್ ಇಟಗಿ ಅವರು ಉದ್ಘಾಟಿಸಿ, ಮಾತನಾಡಿ, ಬೇಸಿಗೆ ಇರುವುದರಿಂದ ಮಕ್ಕಳು ಒಳಾಂಗಣ ಆಟಗಳನ್ನು ಆಡಬೇಕು. ಸರಿಯಾಗಿ ಪೌಷ್ಟಿಕ ಆಹಾರವನ್ನು ಸೇವಿಸಬೇಕು. ಜಾಸ್ತಿ ನೀರನ್ನು ಕುಡಿಯಬೇಕು. ಗಿಡ ಹತ್ತುವುದು, ಕೆರೆಗಳಿಂದ ದೂರ ಇರುವುದು, ಮೊಬೈಲ್ ಬಳಕೆ ಮಾಡದೇ ಇರುವುದು, ಮಕ್ಕಳು ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕು. ಯೋಗ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು. ಆಪ್ತ ಕಾರ್ಯದರ್ಶಿ ಅನ್ನಪೂರ್ಣ ಸಂಗಳದ ಮಾತನಾಡಿ ಯೋಗ ಶಿಬಿರದ ಕುರಿತು ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಶಿಬರದಲ್ಲಿ ಹುಬ್ಬಳ್ಳಿ ಧಾರವಾಡದ ಮಕ್ಕಳು ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 