ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯ ಅಭಿಯಾನ; ಕಸದ ವಾಹನ ಓಡಿಸಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದ ಇಒ, ಎಡಿ ಅಧಿಕಾರಿಗಳು
Freedom with cleanliness campaign
ಗಜೇಂದ್ರಗಡ 14 : ತಾಲೂಕು ಪಂಚಾಯತ ಇಒ ಚಂದ್ರಶೇಖರ ಕಂದಕೂರ ಮತ್ತು ಎಡಿ ಬಸವರಾಜ ಬಡಿಗೇರಸೂಡಿ ಗ್ರಾಮದಲ್ಲಿ ಕಾಲ್ನಡಿಗೆ ಮೂಲಕ ಮನೆ-ಮನೆಗೆ ತೆರಳಿ ಹರ್ ಘರ್ ಸ್ವಚ್ಛತೆ ಬಗ್ಗೆ ಗ್ರಾಮಸ್ಥರಿಗೆ ತಿಳುವಳಿಕೆ ಹೇಳಿದ ತಾಪಂ ಇಒ ಮತ್ತು ಎಡಿಗಜೇಂದ್ರಗಡ 79 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಅಭಿಯಾನ ನಡೆಸಲಾಗುತ್ತಿದೆ.
ತಾಲೂಕಿನ ಸೂಡಿ ಗ್ರಾಪಂ ವ್ಯಾಪ್ತಿಯಲ್ಲಿ ಇಂದು ಖುದ್ದಾಗಿ ತಾಲೂಕು ಪಂಚಾಯತ ಇಒ ಚಂದ್ರಶೇಖರ ಕಂದಕೂರು ಮತ್ತು ಎಡಿ ಬಸವರಾಜ ಬಡಿಗೇರ ಅವರು ಕಸದ ವಾಹನ ಡ್ರೈವಿಂಗ್ ಮಾಡಿ ಸೂಡಿ ಗ್ರಾಮಸ್ಥರಲ್ಲಿ ಸ್ವಚ್ಛತೆ ಅರಿವು ಮೂಡಿಸಿದಷ್ಟೇ ಅಲ್ಲದೆ ಮನೆಗಳಿಂದ ಸ್ವತಃ ಒಣ ಕಸ ಮತ್ತು ಹಸಿ ಕಸ ಪ್ರತ್ಯೇಕಿಸಿ ಕಸದವಾಹನಕ್ಕೆ ಕಸ ಹಾಕುವುದರ ಮೂಲಕ ಸೂಡಿ ಗ್ರಾಮದಲ್ಲಿ ಸಾರ್ವಜನಿಕರಿಗೆ ಜಂಟಿಯಾಗಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಸಾರುವ ಮೂಲಕ ಸ್ವಚ್ಛತೆಯ ಬಗ್ಗೆ ತಿಳುವಳಿಕೆ ಮೂಡಿಸಿದರು.ಸೂಡಿ ಗ್ರಾಮದ ವಿದ್ಯಾನಗರ, ಶೆಟ್ಟರ ಕಾಲೋನಿ, ಬಜಾರ್ ಮುಖ್ಯ ರಸ್ತೆ, ಬಡಿಕಟ್ಟೆ ಓಣಿ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಸಂಚರಿಸುವುದರ ಮೂಲಕ ಸ್ವಾತಂತ್ರ್ಯ ದಿನಾಚರಣೆ ಸಂದೇಶ ಸಾರುವುದರೊಂದಿಗೆ ಸ್ವಚ್ಛತೆಗಾಗಿ ಗ್ರಾಪಂ ಸಿಬ್ಬಂದಿ ಜೊತೆ ಕೈಜೋಡಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿಕೊಂಡರು.
ಪ್ರತಿ ಮನೆಗಳಿಗೆ ತೆರಳಿದ ಇಒ ಮತ್ತು ಎಡಿ ಅವರು, 79 ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವ ನಾವೆಲ್ಲರೂ ನಮ್ಮ ಗ್ರಾಮವನ್ನು ಕಸಮುಕ್ತ ಮಾಡೋಣ ಎಂದರು. ಮನೆಯ ಗ್ರಹಿಣಿಯರನ್ನು ಭೇಟಿಯಾಗಿ ಹಸಿ ಕಸ ಮತ್ತು ಒಣ ಕಸ ಪ್ರತ್ಯೇಕಗೊಳಿಸಿ ಕಸದ ವಾಹನದಲ್ಲೇ ಕಸ ಹಾಕಿ ಅಂತ ಮನವಿ ಮಾಡಿಕೊಂಡರು. ಅಲ್ಲದೇ ಗ್ರಾಮದ ಕಿರಾಣಿ ಅಂಗಡಿ ಮಾಲೀಕರನ್ನು ಭೇಟಿಯಾಗಿ ಗುಟ್ಕಾ, ದಿನಸಿ ಸಾಮಾಗ್ರಿಗಳ ಪ್ಲಾಸ್ಟಿಕ್ ಕವರ್ ಗಳನ್ನು ಎಲ್ಲೆಂದರಲ್ಲಿ ಬೀಸಾಡದೆ ಕಸದಬುಟ್ಟಿಯಲ್ಲಿ ಸಂಗ್ರಹಿಸಿ ಕಸದ ವಾಹನ ಬಂದಾಗ ಸ್ವಚ್ಛತೆಯಿಂದ ಹಾಕಿ ಅಂತ ತಿಳುವಳಿಕೆ ಮೂಡಿಸಿದರು.ಅಗಸ್ಟ್-08 ರಿಂದ 15 ರವರೆಗೆ ನಡೆಯುತ್ತಿರುವ ಈ ಅಭಿಯಾನದಡಿ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯ ನಡೆಯುತ್ತಿದೆ. ಅದರಂತೆ ಸೂಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಇಒ ಕಂದಕೂರ ಅವರು ಆರೋಗ್ಯ ಕೇಂದ್ರದ ವಾತಾವರಣವನ್ನು ಪರೀಶೀಲಿಸಿದರು. ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಅಸ್ಪತ್ರೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಸೂಚಿಸಿದರು.
ಆಸ್ಪತ್ರೆಯ ಬಳಿಯ ಶಿಥೀಲಾವಸ್ಥೆಯಲ್ಲಿರುವ ನೀರಿನ ಟ್ಯಾಂಕ್ ನ್ನು ಪರೀಶೀಲಿಸಿದ ಇಒ ಅವರು, ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಸಾರ್ವಜನಿಕರ ಹಿತದೃಷ್ಟಿಯಿಂದ ನೀರಿನ ಟ್ಯಾಂಕ್ ಗುಣಮಟ್ಟ ಪರೀಶೀಲಿಸಿ ವರದಿ ನೀಡುವಂತೆ ತಾಕೀತು ಮಾಡಿದರು.ಈ ಸಂದರ್ಭದಲ್ಲಿ ಸೂಡಿ ಗ್ರಾಮ ಪಂಚಾಯತ ಪಿಡಿಒ ಅಶೋಕ್ ಕಂಬಿ, ಗ್ರಾಪಂ ಅಧ್ಯಕ್ಷೆ ಶ್ರೀಮತಿ ಆಶಾಬೇಗಂ ಮೂಕಾಶಿ, ಸದಸ್ಯರಾದ ರೇಣುಕಾ ಹರಮನಿ, ಶಾಂತವ್ವ ಕದುರಿಕೋಟೆ, ಕೆ.ಶರಣಬಸವ, ರುದ್ರ್ಪ ಮಾರನಬಸರಿ, ಚೆನ್ನಪ್ಪ ನೂಲ್ವಿ, ಎನ್.ಆರ್.ಎಲ್.ಎಂ ಸಿಬ್ಬಂದಿ ವರ್ಗ ಹಾಗೂ ಸೂಡಿ ಗ್ರಾಪಂ ಸಿಬ್ಬಂದಿ ವರ್ಗ ಹಾಜರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 