ಬ್ಯಾಂಕ್ ಅಧಿಕಾರಿ ಶೆಟ್ಟಿಯಿಂದ ಸಿಬ್ಬಂದಿ ತರಾಟೆಗೆ
ಬೈಲಹೊಂಗಲ : ಪಟ್ಟಣದ ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕಿಗೆ ಪ್ರಾದೇಶಿಕ ವ್ಯವಸ್ಥಾಪಕ ನಿರ್ದೇಶಕ ಶೇಖರ ಶೆಟ್ಟಿ ಗುರುವಾರ ಸಂಜೆ ಭೇಟಿ ನೀಡಿ ಬ್ಯಾಂಕ್ ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಬ್ಯಾಂಕ್ ಸಿಬ್ಬಂದಿ ರೈತರು, ಗ್ರಾಹಕರೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿದ ಬಗ್ಗೆ ಡಿ.5ರಂದು ಎಲ್ಲ ಪತ್ರಿಕೆಗಳಲ್ಲಿ ಪ್ರಕಟಿಸಲಾಗಿತ್ತು. ಅದನ್ನು ಕಂಡ ವ್ಯವಸ್ಥಾಪಕರು ಬ್ಯಾಂಕಿಗೆ ಬಂದು ಸಿಬ್ಬಂದಿಯನ್ನು ತರಾಟೆಗೆ ತಗೆದುಕೊಂಡರು.
ಗ್ರಾಹಕರೊಂದಿಗೆ ಮಾತನಾಡಿ, ಸಿಬ್ಬಂದಿಯಿಂದ ಆದ ಪ್ರಮಾದಕ್ಕೆ ವಿಷಾಧ ವ್ಯಕ್ತಪಡಿಸಿದರು. ಬ್ಯಾಂಕಿಗೆ ಗ್ರಾಹಕರೇ ಜೀವಾಳ. ಗ್ರಾಹಕರಿಲ್ಲದಿದ್ದರೆ ಸಿಬ್ಬಂದಿಯೇ ಇಲ್ಲ. ಇದನ್ನರಿತು ಸಿಬ್ಬಂದಿ ಕರ್ತವ್ಯ ನಿರ್ವಹಿಸಬೇಕು. ಸಿಬ್ಬಂದಿ ಗ್ರಾಹಕರೊಂದಿಗೆ ಗೌರಯುತವಾಗಿ, ಸೌಜನ್ಯವಾಗಿ ವರ್ತಿಸಬೇಕು.
ಸಹಕಾರ ಮನೋಭಾವದಿಂದ ಕರ್ತವ್ಯ ನಿರ್ವಹಿಸಿ ಬ್ಯಾಂಕಿಗೆ, ತಮಗೂ ಒಳ್ಳೆಯ ಹೆಸರು ತಂದುಕೊಡಬೇಕು. ವಿನಾಕಾರಣ ಯಾವುದೇ ತಂಟೆ, ತಕರಾರು ಆಗದಂತೆ ಜಾಗೃತಿವಹಿಸಬೇಕು ಎಂದರು.
ಹಿಂದೆ ಬೈಲಹೊಂಗಲ ಶಾಖೆಯಿಂದ ಹಲವಾರು ಕೋಟಿ ವ್ಯವಹಾರಗಳು ನಡೆಯುತ್ತಿದ್ದವು. ಅದನ್ನು ಮರು ಸ್ಥಾಪಿಸಲು ಕ್ರಮ ಕೈಕೊಳ್ಳಬೇಕು. ಶಾಖೆಯ ಏನೇ ಕುಂದು, ಕೊರತೆಗಳಿದ್ದರೆ ಗ್ರಾಹಕರು, ಸಿಬ್ಬಂದಿ ನನ್ನನ್ನು ಸಂಪರ್ಕಿಸಿದರೆ ತಕ್ಷಣ ಕ್ರಮ ಕೈಕೊಳ್ಳುವುದಾಗಿ ತಿಳಿಸಿದರು.
ಸಿಬ್ಬಂದಿ ಮೇಲೆ ದೂರು ಬಂದರೆ ನಿರ್ಧಾಕ್ಷ್ಯಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 