ಸುಕ್ಷೇತ್ರ ಮುಗಳಖೋಡದಲ್ಲಿ ಇಂದಿನಿಂದ ಶ್ರೀ ರೇಣುಕಾದೇವಿ 26ನೇ ಜಾತ್ರಾ ಮಹೋತ್ಸವ
ಲೋಕದರ್ಶನ ವರದಿ
ಮುಗಳಖೋಡ,21: ರಾಯಬಾಗ ತಾಲೂಕಿನ ಸುಕ್ಷೇತ್ರ ಮುಗಳಖೋಡ ಪಟ್ಟಣದಲ್ಲಿ ಶ್ರೀ ರೇಣುಕಾದೇವಿ 26ನೇ ಜಾತ್ರಾ ಮಹೋತ್ಸವವು ಗುರವಾರ ದಿ 22 ರಿಂದ ಶುಕ್ರವಾರ ದಿ 23 ವರೆಗೆ ಅತಿ ವಿಜೃಂಭನೆಯಿಂದ ಜರುಗುವುದು.
ಗುರುವಾರ ದಿ 22 ರಂದು ಶ್ರೀ ಡಾ.ಮುರಘರಾಜೇಂದ್ರ ಮಹಾಸ್ವಾಮಿಗಳ ಹಸ್ತದಿಂದ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆಯುವುದು. ರಾತ್ರಿ 9 ಗಂಟೆಗೆ ಸ್ಥಳಿಯ ಮೇಳದವರಿಂದ ಆಧ್ಯಾತ್ಮ ವಿಷಯಗಳಿಂದ ಡೊಳ್ಳಿನ ಪದಗಳು ಚೌಡಕಿ ಪದಗಳು ನಡೆಯುವವು.
ಶುಕ್ರವಾರ ದಿ 23 ರಂದು ಮುಂಜಾನೆ 6 ಗಂಟೆಯಿಂದ ಶ್ರೀ ರೇಣುಕಾದೇವಿಗೆ ಮಹಾ ಅಭಿಷೇಕ ಪ್ರಾರಂಭವಾಗುವುದು. ನಂತರ 9 ಗಂಟೆಗೆ ಗ್ರಾಮದ ಸಕಲ ಭಕ್ತರು ಆರತಿ ಕುಂಭಗಳ ಸಕಲ ವಾದ್ಯ ವೈಭವಗಳೊಂದಿಗೆ ಶ್ರೀ ದೇವಿಯ ಭವ್ಯ ಮೆರಣಿಗೆ ನಡೆಯುವುದು. ಮಧ್ಯಾಹ್ನ 12 ಗಂಟೆಗೆ ದೇವಿಯ ಹಡ್ಲಗಿ ತುಂಬುವ ಕಾರ್ಯಕ್ರಮ ನಡೆಯುವುದು. ನಂತರ 01 ಗಂಟೆಯಿಂದ ಮಹಾಪ್ರಸಾದ ನಡೆಯುವುದು. ರಾತ್ರಿ 10 ಗಂಟೆಗೆ ಮದರಖಂಡಿಯ ಶ್ರೀ ಮಲ್ಲಿಕಾಜರ್ುನ ಪ್ರಸಾದಿತ ನಾಟ್ಯ ಸಂಘದಿಂದ "ಸಂಪೂರ್ಣ ಹೇಮರೆಡ್ಡಿ ಮಲ್ಲಮ್ಮ ಎಂಬ ಭಕ್ತಿ ಪ್ರದಾನ ನಾಟಕ ನಡೆಯುವುದು. ಪಟ್ಟಣದ ಎಲ್ಲ ಸದ್ಭಕ್ತರು ಈ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಕಮೀಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 